ದೀಪಾವಳಿ ಹಬ್ಬದ ಪ್ರಯುಕ್ತ ದೀಪಾಲಂಕಾರ ಸ್ಪರ್ಧೆ

ಕಲಬುರಗಿ: ಇಲ್ಲಿನ ಎಸ್. ಆರ್. ಪಾಟೀಲ್ ಫೌಂಡೇಶನ್ ಹಾಗೂ ಪಾಟೀಲ್ ಗ್ರೂಪ್ ಆಫ್ ಕಂಪನಿಸ್ ವತಿಯಿಂದ ಸೂಪರ್ ಮಾರ್ಕೆಟನಲ್ಲಿರುವ ಸಂಗಮ ಹಾಗೂ ತ್ರಿವೇಣಿ ಚಿತ್ರಮಂದಿರದ ಆವರಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ದೀಪಾಲಂಕಾರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.

ಸೋಮವಾರ ಅ.24ರಂದು “ದೀಪಾಲಂಕಾರ ಸ್ಪರ್ಧೆ”ಯನ್ನು ಹಮ್ಮಿಕೊಳ್ಳಲಾಗುವುದು. ಈ ಸ್ಪರ್ಧೆಯಲ್ಲಿ 3 ಅತ್ಯುತ್ತಮ ದೀಪಾಲಂಕಾರಗಳನ್ನು ಆಯ್ಕೆಮಾಡಿ ಪ್ರಥಮ ಬಹುಮಾನ 5000, ದ್ವಿತೀಯ ಬಹುಮಾನ 3000 ಹಾಗೂ ತೃತಿಯ ಬಹುಮಾನ 2000 ರೂಪಾಯಿಗಳು ಇದ್ದು, ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರವನ್ನು ನೀಡಲಾಗುವುದು.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ ಹಾಗೂ ವಯಸ್ಸಿನ ಮೀತಿಯಿರುವುದಿಲ್ಲ. ಇಚ್ಚೆಯುಳ್ಳವರು ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲ್ಲಿಚ್ಚುಸುವವರು ತಮ್ಮ ಒಂದು ಪಾಸ್‍ಪೋರ್ಟ ಅಳತೆÀಯ ಭಾವಚಿತ್ರ ಹಾಗೂ ಆಧಾರ ಪ್ರತಿ ಸಲ್ಲಿಸಬೇಕು.

ವಿಶೇಷ ಸೂಚನೆ: ದೀಪಾಲಂಕಾರಕ್ಕೆ ವಿದ್ಯುತ ದೀಪಗಳಿಗೆ ಅವಕಾಶವಿರುವುದಿಲ್ಲ. ಪಣತಿಗಳ, ಎಣ್ಣೆ ಹಾಗೂ ಬತ್ತಿಗಳ ದೀಪಾಲಂಕಾರಕ್ಕೆ ಮಾತ್ರ ಅವಕಾಶವಿರುತ್ತದೆ. ಸ್ಪರ್ಧಾರ್ಥಿಗಳು ದೀಪಾಲಂಕಾರಕ್ಕೆ ರಂಗೋಲಿ, ಹೂವುಗಳು, ಹಣ್ಣುಗಳನ್ನು ಬಳಸಿಕೊಳ್ಳಬಹುದು. ಈ ಸ್ಪರ್ಧೆಯ ಸಮಯ: ಸಂಜೆ 5:00 ಗಂಟೆಯಿಂದ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಸಂದೀಪ ಬಿ. – 9880254069 ಹಾಗೂ ನಾಗರಾಜ – 9972776062 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420