ನಾಳೆ ಕಲಬುರಗಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

0
48

ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಅಕ್ಟೋಬರ್ 23 ರಂದು ಬೆಳಿಗ್ಗೆ 10.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಅಗಮಿಸುವರು.

ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆಳಂದ ಪಟ್ಟಣಕ್ಕೆ ತೆರಳುವ ಮುಖ್ಯಮಂತ್ರಿಗಳು, ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಪ್ರತಿμÁ್ಠಪಿಸಲಾಗಿರುವ ಶ್ರೀ ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸುವರು. ನಂತರ ಪಟ್ಟಣದ ಎಸ್.ಆರ್.ಜೆ.ಶಾಲೆ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Contact Your\'s Advertisement; 9902492681

ಮಧ್ಯಾಹ್ಮ 2 ಗಂಟೆಗೆ ಆಳಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 2.30 ಗಂಟೆಗೆ ಚಿತ್ತಾಪೂರ ತಾಲೂಕಾ ಕ್ರೀಡಾಂಗಣ ಹೆಲಿಪ್ಯಾಡ್ ಗೆ ಆಗಮಿಸುವರು.

ಚಿತ್ತಾಪೂರ ಪಟ್ಟಣದ ಶ್ರೀ ವೆಂಕಟೇಶ ಗಡೇಚೂರ ಆವರಣದಲ್ಲಿ ಭಾರತೀಯ ಜನತಾ ಪಕ್ಷದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಅಲ್ಲಿಂದ ನಿರ್ಗಮಿಸಿ 5.25 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ  ಅಗಮಿಸುವರು. ನಂತರ ಅಲ್ಲಿಂದ 5.30 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here