‘ಮತ್ತೆ ಕಲ್ಯಾಣ’ ವಚನ ಚಳವಳಿ ರೂಪದ ಆಂದೋಲನ: ಸ್ಚಾಗತ ಸಮಿತಿಗೆ ಕಮಕನೂರ, ಪಪ್ಪಾ, ರೇಷ್ಮಿ, ಚಟ್ಟಿ

0
60

ಕಲಬುರಗಿ: ಬಸವಾದಿ ಶರಣರ ಸಮ ಸಮಾಜದ ಪರಿಕಲ್ಪನೆಯ ಅರಿವು ಮತ್ತು ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದಾಶಯದೊಂದಿಗೆ ನಾಡಿನಾದ್ಯಂತ ನಡೆಯುತ್ತಿರುವ ‘ಮತ್ತೆ ಕಲ್ಯಾಣ’ ಎಂಬ ವಚನ ಚಳವಳಿ ರೂಪದ ಆಂದೋಲನ ಆಗಷ್ಟ್ 29 ರಂದು ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ನೇತೃತ್ವದಲ್ಲಿ ಜರುಗಲಿದೆ.

ಆ ಪ್ರಯುಕ್ತ ರವಿವಾರ ಕಲಬುರಗಿಯ ಸುಲಫಲ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ಚಾಗ ಸಮಿತಿಯೊಂದನ್ನು ರಚನೆಯಾಗಿದ್ದು, ಅಧ್ಯಕ್ಷರಾಗಿ ಶರಣು ಪಪ್ಪಾ, ಗೌರವಾಧ್ಯಕ್ಷರಾಗಿ ಎಂಎಲ್ಸಿ ತಿಪ್ಪಣಪ್ಪ ಕಮಕನೂರ, ಕಾರ್ಯಾಧ್ಯಕ್ಷರಾಗಿ ರವೀಂದ್ರ ಶಾಬಾದಿ, ಆರ್.ಜಿ.ಶಟಗಾರ, ಕೋಶಾಧ್ಯಕ್ಷರಾಗಿ ಬಸವರಾಜ ಧೂಳಾಗುಂಡಿ, ಬಸವರಾಜ ಮೊರಬದ, ಪ್ರಧಾನ ಕಾರ್ಯದರ್ಶಿಯಾಗಿ ಮಹಾಂತೇಶ ಕಲಬುರಗಿ, ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯಾಯವಾದಿ ಮಾಲತಿ ರೇಷ್ಮಿ, ಕಾರ್ಯಾಧ್ಯಕ್ಷರಾಗಿ ಜಗದೇವಿ ಚಟ್ಟಿ ಅವರುಗಳು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹೂಗುಚ್ಚ ನೀಡಿ ಗೌರವಿಸಲಾಯಿತು.

Contact Your\'s Advertisement; 9902492681

ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಚವದಾಪುರಿ ಹಿರೇಮಠದ ಪೂಜ್ಯ ಶ್ರೀ ರಾಜಶೇಖರ ಶಿವಾಚಾರ್ಯರು, ಗುರುಬಸವ ಬ್ರಹನ್ಮಠದ ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು, ಬಸವ ಕೇಂದ್ರದ ಸೋಮಣ್ಣ ನಡಕಟ್ಟಿ, ಮಾಜಿ ಶಾಸಕ ಬಿ.ಆರ್.ಪಾಟೀಲ, ಪ್ರಮುಖರಾದ ಬಸವರಾಜ ತಡಕಲ್, ಪ್ರೊ.ಆರ್.ಕೆ ಹುಡಗಿ, ದೇವೇಗೌಡ ತೆಲ್ಲೂರ, ಮಲ್ಲಪ್ಪ ಹೊಸಮನಿ, ಸಂಘಟಕರಾದ ಸುನೀಲ ಹುಡಗಿ, ವಿಜಯಕುಮಾರ ತೇಗಲತಿಪ್ಪಿ, ಪರಮೇಶ್ವರ ಶಟಕಾರ, ಪತ್ರಕರ್ತ-ಸಾಹಿತಿ ಶಿವರಂಜನ್ ಸತ್ಯಂಪೇಟೆ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here