ಬಿಸಿ ಬಿಸಿ ಸುದ್ದಿ

‘ಮತ್ತೆ ಕಲ್ಯಾಣ’ ವಚನ ಚಳವಳಿ ರೂಪದ ಆಂದೋಲನ: ಸ್ಚಾಗತ ಸಮಿತಿಗೆ ಕಮಕನೂರ, ಪಪ್ಪಾ, ರೇಷ್ಮಿ, ಚಟ್ಟಿ

ಕಲಬುರಗಿ: ಬಸವಾದಿ ಶರಣರ ಸಮ ಸಮಾಜದ ಪರಿಕಲ್ಪನೆಯ ಅರಿವು ಮತ್ತು ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದಾಶಯದೊಂದಿಗೆ ನಾಡಿನಾದ್ಯಂತ ನಡೆಯುತ್ತಿರುವ ‘ಮತ್ತೆ ಕಲ್ಯಾಣ’ ಎಂಬ ವಚನ ಚಳವಳಿ ರೂಪದ ಆಂದೋಲನ ಆಗಷ್ಟ್ 29 ರಂದು ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ನೇತೃತ್ವದಲ್ಲಿ ಜರುಗಲಿದೆ.

ಆ ಪ್ರಯುಕ್ತ ರವಿವಾರ ಕಲಬುರಗಿಯ ಸುಲಫಲ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ಚಾಗ ಸಮಿತಿಯೊಂದನ್ನು ರಚನೆಯಾಗಿದ್ದು, ಅಧ್ಯಕ್ಷರಾಗಿ ಶರಣು ಪಪ್ಪಾ, ಗೌರವಾಧ್ಯಕ್ಷರಾಗಿ ಎಂಎಲ್ಸಿ ತಿಪ್ಪಣಪ್ಪ ಕಮಕನೂರ, ಕಾರ್ಯಾಧ್ಯಕ್ಷರಾಗಿ ರವೀಂದ್ರ ಶಾಬಾದಿ, ಆರ್.ಜಿ.ಶಟಗಾರ, ಕೋಶಾಧ್ಯಕ್ಷರಾಗಿ ಬಸವರಾಜ ಧೂಳಾಗುಂಡಿ, ಬಸವರಾಜ ಮೊರಬದ, ಪ್ರಧಾನ ಕಾರ್ಯದರ್ಶಿಯಾಗಿ ಮಹಾಂತೇಶ ಕಲಬುರಗಿ, ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯಾಯವಾದಿ ಮಾಲತಿ ರೇಷ್ಮಿ, ಕಾರ್ಯಾಧ್ಯಕ್ಷರಾಗಿ ಜಗದೇವಿ ಚಟ್ಟಿ ಅವರುಗಳು ಆಯ್ಕೆಗೊಂಡ ಹಿನ್ನೆಲೆಯಲ್ಲಿ ಹೂಗುಚ್ಚ ನೀಡಿ ಗೌರವಿಸಲಾಯಿತು.

ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಚವದಾಪುರಿ ಹಿರೇಮಠದ ಪೂಜ್ಯ ಶ್ರೀ ರಾಜಶೇಖರ ಶಿವಾಚಾರ್ಯರು, ಗುರುಬಸವ ಬ್ರಹನ್ಮಠದ ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು, ಬಸವ ಕೇಂದ್ರದ ಸೋಮಣ್ಣ ನಡಕಟ್ಟಿ, ಮಾಜಿ ಶಾಸಕ ಬಿ.ಆರ್.ಪಾಟೀಲ, ಪ್ರಮುಖರಾದ ಬಸವರಾಜ ತಡಕಲ್, ಪ್ರೊ.ಆರ್.ಕೆ ಹುಡಗಿ, ದೇವೇಗೌಡ ತೆಲ್ಲೂರ, ಮಲ್ಲಪ್ಪ ಹೊಸಮನಿ, ಸಂಘಟಕರಾದ ಸುನೀಲ ಹುಡಗಿ, ವಿಜಯಕುಮಾರ ತೇಗಲತಿಪ್ಪಿ, ಪರಮೇಶ್ವರ ಶಟಕಾರ, ಪತ್ರಕರ್ತ-ಸಾಹಿತಿ ಶಿವರಂಜನ್ ಸತ್ಯಂಪೇಟೆ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420