ಬಿಸಿ ಬಿಸಿ ಸುದ್ದಿ

ಸರಕಾರ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿಲ್ಲ

ಕಲಬುರಗಿ: ಬಿಸಿಯೂಟ ನೀಡುವವರೆಗೆ ಉಪವಾಸ ಹಾಕುತ್ತಿರುವ ಸರಕಾರದ ಕ್ರಮ ಖಂಡನೀಯವಾಗಿದೆ ಎಂದು ಜಿಲ್ಲಾ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಪ್ರಭುದೇವ ಯಳಸಂಗಿ ಹೇಳಿದರು.

ಕಮಲಾಪುರ ನಗರದ ಸರಕಾರಿ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ ಸರಕಾರವು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಸಮಯಕ್ಕೆ ಸರಿಯಾಗಿ ವೇತನ ಕೊಡದೆ ಕಾರ್ಮಿಕರ ಕುಟುಂಬ ಬೀದಿ ಪಾಲಾಗುತ್ತಿರುವದು ವಿಷಾದನೀಯ ಸಂಗತಿ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕಾ ಅಧ್ಯಕ್ಷರಾದ ಮಹಾದೇವಿ ಜಾಧವ ಮಾತನಾಡಿ ಬಿಸಿಯೂಟ ತಯಾರಕರಿಗೆ ಸರಕಾರ ಕನಿಷ್ಠ ವೇತನವೂ ಸರಿಯಾದ ಸಮಯಕ್ಕೆ ನೀಡದೆ, ಸಂಕಷ್ಟದಲ್ಲಿದ್ದ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿಲ್ಲ ಎಂದು ಹೇಳಿದರು.

ವೇತನ ಸೇರಿದಂತೆ ಇತರ ಬೇಡಿಕೆಗಳು ಈಡೇರಿಸದಿದ್ದರೆ ಜಿಲ್ಲಾ ಜಿಲ್ಲಾ ಪಂಚಾಯತ ಕಾರ್ಯಾಲಯ ಮುತ್ತಿಗೆ ಹಾಕಲಾಗುವುದು ಎಂದು ಸಮಾವೇಶದಲ್ಲಿ ನಿರ್ಣಯಿ ಸಲಾಯಿತು.ಮುಖ್ಯ ಅತಿಥಿಗಳಾಗಿ ಎಐಟಿಯುಸಿ ಕಾರ್ಯದರ್ಶಿ ನ್ಯಾಯವಾದಿ ಹಣಮಂತರಾಯ ಅಟ್ಟೂರ,ಕಲಬುರಗಿ ಜಿಲ್ಲಾ ಕಟ್ಟಡ ಕಾರ್ಮಿಕರ ಉಪಾಧ್ಯಕ್ಷರಾದ ಶಿವಲಿಂಗಮ್ಮ ಲೇಂಗಟಿ ಕರ್,ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ತಾಲ್ಲೂಕು ಕಾರ್ಯದರ್ಶಿಯಾದ ಯಶೋಧಾ ರಾಠೋಡ, ಉಪಾಧ್ಯಕ್ಷರಾದ ಅಂಬಿಕಾ ಸರಡಗಿ ಆಗಮಿಸಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಪದ್ಮಾವತಿ ಇಟಿ, ಕಾರ್ಯದರ್ಶಿಯಾಗಿ ಪಾರ್ವತಿ ಜಾಧವ, ಉಪಾಧ್ಯಕ್ಷರಾಗಿ ಕವಿತಾ ಚವ್ಹಾಣ, ಶರಣಮ್ಮ ಸೋನಾರ, ಸಹ ಕಾರ್ಯದರ್ಶಿಗಳಾಗಿ ಅನೀಲಾವತಿ ಮಾಳೆಗಾಂವ, ಖಾಜಾಬಿ ಚಿಮ್ಮನಚೋಡ, ಖಜಾಂಚಿಯಾಗಿ ಅನಿತಾ ಪದ್ಮಾ ಣಿ,ಹಾಗೂ ತಾಲ್ಲೂಕು ಕಾರ್ಯಕಾರಿ ಸದಸ್ಯರಾಗಿ ಬಸಮ್ಮ ಜಾಂತೆ, ಚಲಿತ್ರಾ ನೂಲ್ಕರ್, ಕವಿತಾ ರಾಠೋಡ, ತೇಜಮ್ಮ ಜೀವಣಗಿ ಆಯ್ಕೆಯಾದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

1 hour ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

7 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

21 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago