ಭಾಲ್ಕಿ: ಆಸಕ್ತಿ ಮತ್ತು ಸತತ ಪ್ರಯತ್ನ ಇದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ. ಜನರ ಅರ್ಥವಿಲ್ಲದ ಮಾತುಗಳಿಗೆ ಕಿವಿಗೊಡದೆ ಶರಣರ ವಚನಗಳು ಅಧ್ಯಯನ ಮತ್ತು ಅನುಷ್ಠಾನಗೈಯುತ್ತ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಜರುಗಿದ 282ನೇ ಮಾಸಿಕ ಶರಣಸಂಗಮ ಕಾರ್ಯಕ್ರಮದ ದಿವ್ಯ ಸನ್ನಿಧಾನ ವಹಿಸಿ ಪೂಜ್ಯ ಶ್ರೀಗಳು ಆಶೀರ್ವಚನಗೈದರು. ಪೂಜ್ಯ ಗುರುಬಸವ ಪಟ್ಟದ್ದೇವರು ದಿವ್ಯ ನೇತೃತ್ವ ವಹಿಸಿದ್ದರು.

ಸನ್ಮಾನ ಸ್ವೀಕರಿಸಿದ ಶರಣೆ ಶಾರದಾ ಮಾಳಗೆ ಅವರು, ಮನುಷ್ಯ ತಾನು ಮೊದಲು ಸಮರ್ಥವಾಗಿ ಬೆಳೆದು ನಂತರದಲ್ಲಿ ತನ್ನ ಸುತ್ತಮುತ್ತಲಿನ ಸಮಾಜ ಸೇವೆ ಮಾಡಬೇಕು. ಇಂದಿಗೂ ಸಮಾಜದಲ್ಲಿ ಮುಖ್ಯವಾಹಿನಿಗೆ ಬರದ ಮಕ್ಕಳು ಬಹಳ ಸಂಖ್ಯೆಯಲ್ಲಿದ್ದಾರೆ. ಅಂಥವರನ್ನು ಗುರುತಿಸಿ ಶಿಕ್ಷಣ ಮತ್ತು ಸಂಸ್ಕಾರ ನೀಡಿ ಬೆಳೆಸುವುದು ಮುಖ್ಯವಾಗಿದೆ ಎಂದು ನುಡಿದರು.

ಬಸವರಾಜ ಮರೆ, ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಸಾಧನೆ ಮಾಡಿದ ಕರಬಸಯ್ಯ ಮಠಪತಿ, ಶಾರದಾ ಮಾಳಗೆ, ಡಾ.ಸಂಜೀವಕುಮಾರ ಜುಮ್ಮಾ, ಶಿವಕುಮಾರ ಲದ್ದೆ ಮತ್ತು ಪ್ರಜ್ವಲ್ ಬಿ. ಶೇರಿಕಾರ ಅವರಿಗೆ ಸನ್ಮಾನಿಸಲಾಯಿತು.

ಅಫಜಲಪೂರ ಬಸವಭಕ್ತರಾದ ಸದಾಶಿವ ಮೇತ್ರೆ, ರಾಜೇಂದ್ರ ನರೋಣ, ಬಸವರಾಜ ಕೆಂಗನಾಳ, ಅಮೃತಪ್ಪ ಪಾಟೀಲ, ಶಿವಪುತ್ರ ಆಲೆಗಾಂವ, ದಯಾನಂದ ನರೋಣ ಅವರು ಉಪಸ್ಥಿತರಿದ್ದರು. ಚಂದ್ರಕಲಾ ಜೋಸೆಫ್ ಭಕ್ತಿದಾಸೋಹ ವಹಿಸಿಕೊಂಡಿದ್ದರು. ಯಲ್ಲನಗೌಡ ಬಾಗಲಕೋಟ, ಶ್ರೀದೇವಿ ಸ್ವಾಮಿ ಅವರಿಂದ ವಚನ ಗಾಯನ ನಡೆಯಿತು. ರಾಜು ಜುಬರೆ ಸ್ವಾಗತಿಸಿದರು. ವೀರಣ್ಣ ಕುಂಬಾರ ನಿರೂಪಿಸಿದರು. ಶಾಂತಯ್ಯ ಸ್ವಾಮಿ ವಂದಿಸಿದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

3 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

12 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

12 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

13 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

15 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420