ಬಿಸಿ ಬಿಸಿ ಸುದ್ದಿ

ಶಿವಪ್ಪ ಮಾಲಿ ಪಾಟೀಲ್ ಉತ್ತಮ ಪೊಲೀಸ್ ಪೇದೆಯಾಗಿದ್ದರು: ಪಿಐ ಸುನೀಲ ಕುಮಾರ

ಸುರಪುರ: ಕಳೆದ ಅಕ್ಟೋಬರ್ 13 ರಂದು ಕಡೂರು ಪೊಲೀಸ್ ತರಬೇತಿ ಕೇಂದ್ರದಿಂದ ಕಾಣೆಯಾಗಿದ್ದ ಇಲ್ಲಿಯ ಪೊಲೀಸ್ ಠಾಣೆಯ ಎಎಸ್‍ಐ ಶಿವಪ್ಪ ಮಾಲಿ ಪಾಟೀಲ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು,ಅವರ ಸಾವಿಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಠಾಣೆಯ ಪಿಐ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಪೊಲೀಸ್ ಠಾಣೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿದರು.

ಸಭೆಯ ಆರಂಭದಲ್ಲಿ ಮೃತ ಶಿವಪ್ಪ ಮಾಲಿ ಪಾಟೀಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮೇಣದ ಬತ್ತಿಯನ್ನು ಬೆಳಗಿ ಪುಷ್ಪಾರ್ಚನೆ ಮಾಡಿ ನಂತರ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಆತ್ಮಕ್ಕೆ ಶಾಂತಿ ಕೋರಿದರು.

ಈ ಸಂದರ್ಭದಲ್ಲಿ ಪಿಐ ಸುನೀಲಕುಮಾರ ಮೂಲಿಮನಿ ಮಾತನಾಡಿ,ಶಿವಪ್ಪ ಮಾಲಿ ಪಾಟೀಲ್ ಅವರು ಠಾಣೆಯಲ್ಲಿ ಒಬ್ಬ ಉತ್ತಮ ಕೆಲಸಗಾರರಾಗಿದ್ದರು,ಅವರ ಸೇವೆ ನಮ್ಮೆಲ್ಲರಿಗೂ ಸದಾಕಾಲ ನೆನಪಲ್ಲಿ ಉಳಿಯಲಿದೆ.ಅವರ ಸಾವು ನಿಜಕ್ಕೂ ನಮಗೆ ತುಂಬಾ ನೋವನ್ನುಂಟು ಮಾಡಿದೆ.ಅವರ ಸಾವು ಹೇಗಾಯಿತು ಎಂಬುದು ತಿಳಿಯಬೇಕಿದೆ.ಇಲ್ಲಿರುವ ಎಲ್ಲ ನಮ್ಮ ಸಿಬ್ಬಂದಿಗಳಿಗೆ ಶಿವಪ್ಪ ಅವರ ಸೇವೆ ಮಾದರಿಯಾಗಿದೆ ಎಂದರು.

ಇ ಸಂದರ್ಭದಲ್ಲಿ ಪಿಎಸ್‍ಐಗಳಾದ ಕೃಷ್ಣಾ ಸುಬೇದಾರ್,ನಬಿಲಾಲ ಮಕಾಂದಾರ,ಸಿದ್ದಣ್ಣ ಹಾಗೂ ಎಎಸ್‍ಐ ಸೇರಿ ಎಲ್ಲಾ ಪೊಲೀಸ್ ಪೇದೆಗಳು ಹಾಗೂ ಮಹಿಳಾ ಪೇದೆಗಳು ಭಾಗವಹಿಸಿದ್ದರು.

ಶಿವಪ್ಪ ಮಾಲಿ ಪಾಟೀಲ್ ಅಂತ್ಯ ಸಂಸ್ಕಾರ: ಶನಿವಾರ ಕಡೂರಿನಲ್ಲಿ ನಿಧನರಾಗಿದ್ದ ಸುರಪುರ ಠಾಣೆಯ ಎಎಸ್‍ಐ ಆಗಿದ್ದ ಶಿವಪ್ಪ ಮಾಲಿ ಫಾಟೀಲ್ ಅವರ ಅಂತ್ಯ ಸಂಸ್ಕಾರವನ್ನು ದೇವದುರ್ಗ ತಾಲೂಕಿನ ಅವರ ಸ್ವಗ್ರಾಮ ಯರಗುಡ್ಡದಲ್ಲಿ ನೆರವೇರಿಸಲಾಯಿತು.

ಸೋಮವಾರ ಬೆಳಿಗ್ಗೆ ನಡೆದ ಅಂತ್ಯ ಸಂಸ್ಕಾರದಲ್ಲಿ ಪಿಐ ಸುನೀಲಕುಮಾರ ಮೂಲಿಮನಿ ಹಾಗೂ ಪಿಎಸ್‍ಐಗಳು ಮತ್ತು ಎಲ್ಲಾ ಪೊಲೀಸ್ ಪೇದೆಯವರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮೃತ ದೇಹವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೂ ಇಡಲಾಗಿತ್ತು,ನಂತರ ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್ ಇಲಾಖೆಯ ಗೌರವ ವಂದನೆಯೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago