ಸುರಪುರ: ದೀಪಾವಳಿ ಹಬ್ಬ ಆಚರಣೆ ಅಂಗವಾಗಿ ನಗರದ ಎಲ್ಲೆಡೆ ಗ್ರಾಹಕ ಖರೀದಿ ಜೋರಾಗಿ ಕಂಡುಬಂತು.ನಗರದ ಮಹಾತ್ಮ ಗಾಂಧಿ ವೃತ್ತ,ದರಬಾರ ರಸ್ತೆ,ಬಸ್ ನಿಲ್ದಾಣ ಸೇರಿ ಎಲ್ಲಾ ಕಡೆಗಳಲ್ಲಿ ಜನರು ಹಬ್ಬಕ್ಕಾಗಿ ಬೇಕಾದ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು.
ದೀಪಾವಳಿ ಆಚರಣೆ ಅಂಗವಾಗಿ ಮಣ್ಣಿನ ದೀಪಗಳ ಖರೀದಿ, ಅಂಗಡಿಗಳ ಪೂಜೆ,ಮನೆಗಳಲ್ಲಿ ಲಕ್ಷ್ಮೀ ಪೂಜೆಗಾಗಿ ಹೂ,ಹಣ್ಣು,ತೆಂಗಿನ ಗರಿಗಳ ಖರೀದಿ,ಅಂಗಡಿಗಳ ಅಲಂಕಾರಿಕ ವಸ್ತುಗಳ ಖರೀದಿಗೆ ಜನರು ಮುಂದಾಗಿದ್ದರು.ಅಲ್ಲದೆ ಕಿರಾಣಿ ಅಂಗಡಿಗಳು,ಬಟ್ಟೆ ಅಂಗಡಿಗಳಲ್ಲೂ ಜನ ತುಂಬಿದ್ದರು.ಆದರೆ ಖರೀದಿಗೆ ಮುಂದಾಗಿದ್ದ ಜನರು ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಅನೇಕ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದು ಕಂಡುಬಂತು.ಯಾವುದೇ ವಸ್ತು ಖರೀದಿ ಮಾಡಿದರು ಬೆಲೆ ಏರಿಕೆಯಿಂದಾಗಿ ತತ್ತರಿಸುವಂತಾಗಿದೆ ಎನ್ನುತ್ತಿರುವುದು ಕಂಡುಬಂತು.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಹಬ್ಬದ ಆಚರಣೆಗೆ ತೊಡಕಾಗಿತ್ತು,ಈಗ ಕೊರೊನಾ ಕಳೆದಿದ್ದರಿಂದ ಜನರು ಹಬ್ಬದ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲವಾದ್ದರಿಂದ ಜನರು ಸಂತೋಷದಿಂದ ಹಬ್ಬದ ಆಚರಣೆಗೆ ಮುಂದಾಗಿದ್ದು,ಎಲ್ಲೆಡೆ ಖರೀದಿಗೆ ಮುಂದಾಗಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…