ದೀಪದಿಂದ ಬಾಹ್ಯ ಕತ್ತಲೆ, ವಚನಗಳಿಂದ ಆಂತರಿಕ ಕತ್ತಲೆ ದೂರ

ಕಲಬುರಗಿ: ದೀಪಗಳು ಬೆಳಕನ್ನು ನೀಡಿ ಹೊರಗಿನ ಕತ್ತಲೆಯನ್ನು ಕಳೆಯುತ್ತವೆ. ವಚನಗಳು, ಉತ್ತಮ ಪುಸ್ತಕಗಳ ಅಧ್ಯಯನ ಮಾಡಿ, ಅವುಗಳ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಅಜ್ಞಾನ, ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ ಎಂಬ ಆಂತರಿಕ ಕತ್ತಲೆ ದೂರವಾಗುತ್ತದೆ ಎಂದು ಉಪನ್ಯಾಸಕ, ಪ್ರಗತಿಪರ ಚಿಂತಕ ಎಚ್.ಬಿ.ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಓಂಕಾರೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೋಮವಾರ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ವಚನಗಳÀ ಮತ್ತು ವಿವಿಧ ಮಹಾತ್ಮರು, ಮಹನೀಯರ ಜೀವನ ಚರಿತ್ರೆಯ ಪುಸ್ತಕಗಳನ್ನು ವಿತರಿಸುವ ಮೂಲಕ “ವಚನ-ಜ್ಞಾನ ದೀಪೋತ್ಸವ” ಎಂಬ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ವಚನಗಳಲ್ಲಿ ಪ್ರತಿಯೊಂದು ಸಮಸ್ಯೆಗೆ ಪರಿಹಾರ ದೊರಕುತ್ತದೆ. ಅವುಗಳನ್ನು ಅಧ್ಯಯನ ಮಾಡಬೇಕು. ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ವಚನಗಳಿದೆ. ಅವುಗಳು ಸಾಧನೆಯ ದಾರಿಯನ್ನು ತಿಳಿಸುವ ಮೂಲಕ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಮಾಡುವ ಸಾಧನಗಳಾಗಿವೆ. ನಾವು ಹೆಚ್ಚು ಓದಿದಷ್ಟು ನಮ್ಮ ಅರಿವು ಮತ್ತು ಜ್ಞಾನದ ವ್ಯಾಪ್ತಿ ಹೆಚ್ಚಾಗುತ್ತದೆ. ಹೆಚ್ಚಿನ ಅಧ್ಯಯನದಿಂದ ವ್ಯಕ್ತಿಯು, ಶಕ್ತಿಯಾಗುತ್ತಾನೆ. ಆದ್ದರಿಂದ ಅನೇಕ ಚಟಗಳನ್ನು ರೂಢಿಸಿಕೊಂಡು ಹಾಳಾಗುವ ಬದಲು, ವಚನಗಳು, ಉತ್ತಮವಾದ ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸವನ್ನು ಅಳವಡಿಸಿಕೊಂಡರೆ ಬದುಕು ಸುಂದರವಾಗುತ್ತದೆ ಎಂದರು.

ಜಿಲಾನಾಬಾದ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಧರ್ಮರಾಜ ಜವಳಿ ಮಾತನಾಡಿ, ಜ್ಞಾನಕ್ಕಿಂತ ದೊಡ್ಡ ಸಂಪತ್ತು, ಶಕ್ತಿ ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ಪ್ರತಿಯೊಬ್ಬರು ಪಡೆಯಬೇಕಾದರೆ ಸದಾ ಪುಸ್ತಕಗಳನ್ನು ಓದಬೇಕು. ಬಾಲ್ಯದಿಂದಲೇ ಮಹನೀಯರ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಸಿದ್ದರಾಮ ತಳವಾರ, ರಾಜಶೇಖರ ಮುನ್ನಳ್ಳಿ, ದಿಗಂಬರ ಸಿಂಧೆ, ಅಮೃತ ಪೂಜಾರಿ, ರಾಮಲಿಂಗ ಸ್ವಾಮಿ, ವಿಜಯಕುಮಾರ ದುತ್ತರಗಾಂವ, ಕಲ್ಯಾಣರಾವ ಪಾಟೀಲ, ಹಲವಯ್ಯ ಸ್ವಾಮಿ, ಬಸವರಾಜ ತಳವಾರ, ಸಮೀಕ್ಷಾ ಎಸ್.ತಳವಾರ ಸೇರಿದಂತೆ ಬಡಾವಣೆಯ ನಾಗರಿಕರು, ಮಕ್ಕಳು ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420