ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ವಿರಾಟ್ ಸಮಾವೇಶ 30ರಂದು

0
66

ಕಲಬುರಗಿ: ಅ.30ರಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ,ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಶಾಸಕ ರಾಜಕುಮಾರ ಪಾಟೀಲ ಸೇಡಂ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಕೆಸರಟಗಿ ಬಳಿಯ ರದ್ದೇವಾಡಗಿ ಲೇಔಟ್‍ನಲ್ಲಿ ಸಮಾವೇಶ ನಡೆಯಲಿದ್ದು, ಈಗಾಗಲೇ ಸಮಾವೇಶದ ವೇದಿಕೆ ನಿರ್ಮಾಣದ ಕಾರ್ಯ ಭರದಿಂದ ಸಾಗಿದೆ. ಒಟ್ಟು 100 ಎಕರೆ ಪ್ರದೇಶದಲ್ಲಿ ಪೆಂಡಾಲಿನ ವ್ಯವಸ್ಥೆ ಮಾಡಲಾಗಿದೆ. 2.5 ಲಕ್ಷ ಜನರಿಗೆ ಕುಳಿತು ಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ 224 ವಿಧಾನ ಸಭಾ ಮತಕ್ಷೇತ್ರದಿಂದ 200ಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಜಾತಿ, ಪಂಗಡ ಸಮುದಾಯದ ಮುಖಂಡರು ಸೇರಿದಂತೆ 5 ಲಕ್ಷಕ್ಕೂ ಜನ ಭಾಗವಹಿಸಲಿದ್ದಾರೆ. ಎಲ್ಲರನ್ನೂ ಸ್ವಾಗತಿಸಲು ಕಲಬುರಗಿ ಸಿದ್ಧವಾಗಿದೆ ಎಂದು ಶುಕ್ರವಾರ ಸುದಿಗೋಷ್ಠಿಯಲ್ಲಿ ತಿಳಿಸಿದರು.

Contact Your\'s Advertisement; 9902492681

ಸಮಾವೇಶಕ್ಕೆ ಆಗಮಿಸುವ ಜನರಿಗೆ 4 ಸಾವಿರ ಬಸ್ ಹಾಗೂ 20 ಸಾವಿರ ನಾಲ್ಕು ಚಕ್ರದ ವಾಹದ ವ್ಯವಸ್ಥೆ ಮಾಡಲಾಗಿದೆ. ಸಾವಿರಕ್ಕೂ ಅಧಿಕ ಹಿಂದುಳಿದ ವರ್ಗದ ನಾಯಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಅವರಿಗೆ ನಗರದ ಹೋಟೆಲ್ ನಲ್ಲಿ ಹಾಗೂ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಜನರಿಗೆ ನಗರದಲ್ಲಿ 50 ಕಲ್ಯಾಣ್ ಮಂಟಪಗಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಜೇವರ್ಗಿ, ರಾಯಚೂರು ನಲ್ಲಿಯೂ ವ್ಯವಸ್ಥೆ ಮಾಡಲಾಗಿದೆ ತಿಳಿಸಿದರು.

ಶಾಸಕರಾದ ಶಶೀಲ್ ಜಿ. ನಮೋಶಿ, ದತ್ತಾತ್ರೇಯ ಪಾಟೀಲ, ಬಿ.ಜಿ. ಪಾಟೀಲ, ಡಾ. ಅವಿನಾಶ ಜಾಧವ, ಪಕ್ಷದ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಬಿಜೆಪಿ ಗ್ಗರಾಮೀಣ ಅರ್ಧಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಇತರರಿದ್ದರು.

ದಕ್ಷಿಣ ಭಾರತದಲ್ಲೇ ಇದೆ ಪ್ರಥಮ ಬಾರಿಗೆ ಹಿಂದುಳಿದ ವರ್ಗದವರ ಅತಿ ದೊಡ್ಡ ಸಮಾವೇಶ ಇದಾಗಿದೆ.  ಸಮಾವೇಶ ಯಶಸ್ವಿಗೆ 8 ತಂಡಗಳು ರಾಜ್ಯಾದ್ಯಂತ ಪ್ರವಾಸ ಮಾಡಿವೆ. ಕಲ್ಯಾಣ ಕರ್ನಾಟಕ ಹೆಬ್ಬಾಗಿಲು ಕಲಬುರಗಿಒಯಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ರಾಜ್ಯದ 224 ಮತ  ಕ್ಷೇತ್ರಗಳಿಂದ 312 ಮಂಡಲಗಳ ಪ್ರಮುಖರು ಭಾಗವಹಿಸಲಿದ್ದಾರೆ. -ನೆ.ಲ. ನರೇಂದ್ರ ಬಾಬು, ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here