ಹೊನಗುಂಟಾ ಗ್ರಾಮದಲ್ಲಿ ಜಲಜೀವನ ಮಿಷನ್ ಕಾಮಗಾರಿ ಕಳಪೆ ಆರೋಪ

ಶಹಾಬಾದ: ತಾಲೂಕಿನ ಹೊನಗುಂಟಾ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಜಲಜೀವನ ಮಿಷನ್ ಕಾಮಗಾರಿಯು ಸಂಪೂರ್ಣ ಅವೈಜ್ಞಾನಿಕ ಕಳಪೆ ಮಟ್ಟದಿಂದ ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲವೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ರಾಯಪ್ಪ ಹುರಮುಂಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕಳಪೆ ಮಟ್ಟದ ಕಾಮಗಾರಿ ಮಾಡಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಬೆಂಗಳೂರಿನ ಸಂಬಂಧಪಟ್ಟ ಇಲಾಖೆಗೂ ದೂರು ಸಲ್ಲಿಸಿ, ಕೂಡಲೇ ಬಿಲ್ ತಡೆ ಹಿಡಿದು ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ.ಅಲ್ಲದೇ ಜಿಪಂ ಸಿಎಸ್ ಅವರಿಗೆ ದೂರು ನೀಡಲಾಗಿದೆ.ಆದರೂ ಗುತ್ತಿಗೆದಾರನಿಗೆ 40% ಹಣ ಗುತ್ತಿಗೆದಾರನಿಗೆ ಪಾವತಿಯಾಗಿದೆ.

ಹೊನಗುಂಟಾ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದು, ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ ಮಿಷನ್ ಯೋಜನೆಯ ಕಾಮಗಾರಿ ಆರಂಭಿಸುವ ಮೊದಲು ಕೇಂದ್ರ ಹಾಗೂ ರಾಜ್ಯ ಸರಕಾರದ ನಿಯಮ ಪಾಲಿಸಿಲ್ಲ. ಸರಕಾರದ ಆದೇಶದ ಪ್ರಕಾರ ಗ್ರಾಮ ಸಭೆ ಕರೆದು ಯೋಜನೆ ಬಗ್ಗೆ ಮಾಹಿತಿ ನೀಡಿ, ಗ್ರಾಮಸ್ಥರ ಅನುಮತಿ ಪಡೆಯಬೇಕು. ಆದರೆ ಇಲ್ಲಿ ಯಾವುದೇ ನಿಯಮ ಪಾಲನೆಯಾಗಿಲ್ಲ. ಅಧಿಕಾರಿಗಳು ಸರ್ಕಾರದ ಯಾವುದೇ ಮಾರ್ಗಸೂಚಿ ಅನುಸರಿಸದೇ ನೇರವಾಗಿ ಕಾಮಗಾರಿ ಆರಂಭ ಮಾಡಿದ್ದಾರೆ.ಅದು ಕೂಡ ಕಳಪೆ ಮಟ್ಟದಿಂದ ಕೂಡಿದೆ.

ಪ್ರತಿ ಮನೆಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಹಾಗೆ ಮಹಿಳೆಯರು ನೀರಿಗಾಗಿ ಪರದಾಡುವವುನ್ನು ತಪ್ಪಿಸುವ ಮತ್ತು ಆರೋಗ್ಯ ಕಾಪಾಡುವುದು ಯೋಜನೆಯ ಮೂಲ ಉದ್ದೇಶವಾಗಿದೆ.

ಆದರೆ ಕಳಪೆ ಮಟ್ಟದ ಪೈಪ್‍ಗಳು, ಅವೈಜ್ಞಾನಿಕ ಕಾಮಗಾರಿ,ಸಿಸಿ ರಸ್ತೆ ತೋಡಿ ಕೆಲವು ಕಡೆ ಮುಚ್ಚದೇ ಹಾಗೇ ಬಿಟ್ಟಿರುವುದು.ಒಡೆದಿರುವ ರಸ್ತೆ ದುರಸ್ತಿ ಮಾಡದರಿವುದು ಕಂಡು ಬಂದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದೇ ಬಿಲ್ ಪಾವತಿ ಮಾಡಿದ್ದು ನೋಡಿದರೇ ಅವರು ಕೂಡ ಭಾಗಿಯಾಗಿದ್ದಾರೆ ಎಂದು ತಿಳಿದು ಬರುತ್ತದೆ.

ಕೆಲವು ಕಡೆ ತೊಟ್ಟಿ ಹಾಕಿದ್ದಾರೆ.ಇನ್ನೂ ಕೆಲವು ಕಡೆ ತೊಟ್ಟಿ ಹಾಕಿಲ್ಲ.ಮನಸ್ಸಿಗೆ ಬಂದಂತೆ ಪೈಪ್ ಲೈನ್ ಹಾಕಿದ್ದಾನೆ. ಜಲಜೀವನ ಮಿಷನ್ ಯೋಜನೆಯಡಿ ಮಾಡಿದ ಕಾಮಗಾರಿಯನ್ನು ಎಸ್‍ಡಿಪಿ ಯೋಜನೆಯಡಿ ಪೈಪ್ ಲೈನ್ ಕಾಮಗಾರಿ ಮಾಡಲಾಗಿದೆ ತೋರಿಸಿ ತರಾತುರಿಯಲ್ಲಿ ಸುಮಾರು 5 ಲಕ್ಷ ರೂ. ಹಣ ಲೂಟಿ ಹೊಡೆದಿದ್ದಾರೆ.ಈ ಬಗ್ಗೆ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420