ಬೆಂಗಳೂರು: ನವದೆಹಲಿಯಲ್ಲಿ ಮತದಾನ ಜಾಗೃತಿಗಾಗಿ ವಿನೂತನ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯ ರೇಷ್ಮೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಕೆ. ಸಿ. ನಾರಾಯಣ ಗೌಡ ರವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸಿಸಿದರು!
ಮೋಹನ್ ಕುಮಾರ್ ದಾನಪ್ಪ, ವಕೀಲರು ಬೆಂಗಳೂರು, ಇವರು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರ 72ನೇ ಜನ್ಮದಿನದ ಅಂಗವಾಗಿ ‘ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ’ ಎಂಬ ಶೀರ್ಷಿಕೆಯಡಿ ಎಲ್ಲಾ ರೀತಿಯ ಚುನಾವಣೆಗಳಲ್ಲಿ ರಾಷ್ಟ್ರದ ಜನರು ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ದಿನಾಂಕ 17.09.22 ರಂದು ನವದೆಹಲಿಯ ಕರ್ನಾಟಕ ಭವನದಿಂದ ಕೆಂಪು ಕೋಟೆಯವರೆಗೂ ಬಲಗೈನಲ್ಲಿ ರಾಷ್ಟ್ರಧ್ವಜ, ಎಡಗೈಯಲ್ಲಿ ಕರ್ನಾಟಕ ರಾಜ್ಯ ಧ್ವಜವನ್ನು ಹಿಡಿದು 3 ಗಂಟೆಗಳ ಕಾಲ ತಡೆರಹಿತವಾಗಿ ಓಡುವ ಮೂಲಕ ವಿನೂತನ ಮ್ಯಾರಥಾನ್ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ವಿನೂತನ ಪ್ರಯತ್ನ ಮಾಡಿರುವುದಕ್ಕೆ ಅಭಿನಂದನೆಗಳು.
ರಾಜ್ಯದ ವ್ಯಕ್ತಿಯೊಬ್ಬರು ಇಂತಹ ಜಾಗೃತಿಗಾಗಿ ಮ್ಯಾರಥಾನ್ ನಡೆಸಿರುವುದು ಇದೇ ಪ್ರಥಮ, ಇದು ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ದಾಖಲೆಯಾಗಿರುವುದು ಹೆಮ್ಮೆಯ ಸಂಗತಿ. ಮುಂದೆಯೂ ಇವರು ಜನರಲ್ಲಿ ಜಾಗೃತಿ ಮೂಡಿಸುವ ಇಂತಹ ಅನೇಕ ವಿಭಿನ್ನ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ನಾಡಿನ ಯುವಜನತೆಗೆ ಸ್ಪೂರ್ತಿ/ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾರೆಂದು ಆಶಿಸುತ್ತಾ, ಮೋಹನ್ ಕುಮಾರ್ ದಾನಪ್ಪ ಇವರ ಈ ಸಾಧನೆಗಾಗಿ ರಾಜ್ಯ ರೇಷ್ಮೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಕೆ. ಸಿ. ನಾರಾಯಣ ಗೌಡ ರವರು ಮತ್ತೊಮ್ಮೆ ಶುಭ ಹಾರೈಸಿದ್ದಾರೆ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…