ರಾಜ್ಯದ ವ್ಯಕ್ತಿಯೊಬ್ಬರು ದೆಹಲಿಯಲ್ಲಿ ಜಾಗೃತಿಗಾಗಿ ಮ್ಯಾರಥಾನ್ ನಡೆಸಿರುವುದು ಇದೇ ಪ್ರಥಮ: ಕೆ.ಸಿ.ನಾರಾಯಣ ಗೌಡ

ಬೆಂಗಳೂರು: ನವದೆಹಲಿಯಲ್ಲಿ ಮತದಾನ ಜಾಗೃತಿಗಾಗಿ ವಿನೂತನ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯ ರೇಷ್ಮೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಕೆ. ಸಿ. ನಾರಾಯಣ ಗೌಡ ರವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸಿಸಿದರು!

ಮೋಹನ್ ಕುಮಾರ್ ದಾನಪ್ಪ, ವಕೀಲರು ಬೆಂಗಳೂರು, ಇವರು ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರ 72ನೇ ಜನ್ಮದಿನದ ಅಂಗವಾಗಿ ‘ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ’ ಎಂಬ ಶೀರ್ಷಿಕೆಯಡಿ ಎಲ್ಲಾ ರೀತಿಯ ಚುನಾವಣೆಗಳಲ್ಲಿ ರಾಷ್ಟ್ರದ ಜನರು ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ದಿನಾಂಕ 17.09.22 ರಂದು ನವದೆಹಲಿಯ ಕರ್ನಾಟಕ ಭವನದಿಂದ ಕೆಂಪು ಕೋಟೆಯವರೆಗೂ ಬಲಗೈನಲ್ಲಿ ರಾಷ್ಟ್ರಧ್ವಜ, ಎಡಗೈಯಲ್ಲಿ ಕರ್ನಾಟಕ ರಾಜ್ಯ ಧ್ವಜವನ್ನು ಹಿಡಿದು 3 ಗಂಟೆಗಳ ಕಾಲ ತಡೆರಹಿತವಾಗಿ ಓಡುವ ಮೂಲಕ ವಿನೂತನ ಮ್ಯಾರಥಾನ್ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ವಿನೂತನ ಪ್ರಯತ್ನ ಮಾಡಿರುವುದಕ್ಕೆ ಅಭಿನಂದನೆಗಳು.

ರಾಜ್ಯದ ವ್ಯಕ್ತಿಯೊಬ್ಬರು ಇಂತಹ ಜಾಗೃತಿಗಾಗಿ ಮ್ಯಾರಥಾನ್ ನಡೆಸಿರುವುದು ಇದೇ ಪ್ರಥಮ, ಇದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ದಾಖಲೆಯಾಗಿರುವುದು ಹೆಮ್ಮೆಯ ಸಂಗತಿ. ಮುಂದೆಯೂ ಇವರು ಜನರಲ್ಲಿ ಜಾಗೃತಿ ಮೂಡಿಸುವ ಇಂತಹ ಅನೇಕ ವಿಭಿನ್ನ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ನಾಡಿನ ಯುವಜನತೆಗೆ ಸ್ಪೂರ್ತಿ/ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾರೆಂದು ಆಶಿಸುತ್ತಾ, ಮೋಹನ್ ಕುಮಾರ್ ದಾನಪ್ಪ ಇವರ ಈ ಸಾಧನೆಗಾಗಿ ರಾಜ್ಯ ರೇಷ್ಮೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಕೆ. ಸಿ. ನಾರಾಯಣ ಗೌಡ ರವರು ಮತ್ತೊಮ್ಮೆ ಶುಭ ಹಾರೈಸಿದ್ದಾರೆ

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

1 hour ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

3 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

3 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420