ಕಲಬುರಗಿ: ಧೂಮಪಾನ, ಮದ್ಯಾಪಾನ, ಜಡಜೀವನ ಶೈಲಿ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಒತ್ತಡದ ಬದುಕು, ಸ್ಥೂಲಕಾಯ, ಹೃದಯಸಂಬಂಧಿ ತೊಂದರೆ ಸೇರಿದಂತೆ ಮುಂತಾದ ಕಾರಣಗಳಿಂದ ಪಾಶ್ರ್ವವಾಯು ಉಂಟಾಗುತ್ತದೆ. ಧೂಮಪಾನ ಮತ್ತು ಆಲ್ಕೋಹಾಲ್ ಸೇವನೆ ಮಾಡದಿರುವುದು, ವ್ಯಾಯಾಮ, ಯೋಗ, ಒತ್ತಡರಹಿತ ಬದುಕು, ಸೂಕ್ತ ವಿಶ್ರಾಂತಿ, ಸದಾ ಚಟುವಟಿಕೆಯಿಂದರಿವುದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ಅದಕ್ಕೆ ಸೂಕ್ತ ಚಿಕಿತ್ಸೆ ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಪಾಶ್ರ್ವವಾಯುವಿನಿಂದ ದೂರವಿರಲು ಸಾಧ್ಯವಿದೆ ಎಂದು ಬಸವೇಶ್ವರ ಆಸ್ಪತ್ರೆಯ ತಜ್ಞ ವೈದ್ಯ ಡಾ.ವಿಶ್ವರಾಜ ಬಿ.ತಡಕಲ್ ಹೇಳಿದರು.
ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯಿರುವ ‘ತಡಕಲ್ ಸ್ಪೇಷಾಲಿಟಿ ಕ್ಲಿನಿಕ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ವಿಶ್ವ ಪಾಶ್ರ್ವವಾಯು ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ ಇಳಿಬೀಳುವುದು, ಬದಲಾವಣೆ, ಕೈ-ಕಾಲುಗಳ ಚಲನೆಯಲ್ಲಿ ತೊಂದರೆ, ಮಾತಿನಲ್ಲಿ ತೊದಲುವಿಕೆ, ದೃಷ್ಟಿಯಲ್ಲಿ ತೊಂದರೆ, ಚಲಿಸುವಾಗ ಶ್ರಮವಾಗುವುದು, ವಿಪರಿತ ತಲೆನೋವು ಇವುಗಳು ಪಾಶ್ರ್ವವಾಯುವಿನ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ತಜ್ಞ ವೈದ್ಯರನ್ನು ಕಂಡು ತಪಾಸಣೆ ಮಾಡಿಕೊಳ್ಳಬೇಕು. ಇದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಳಗವು ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಪ್ರಮುಖರಾದ ಬಸವರಾಜ ತಡಕಲ್, ಶ್ರೀಗೌರಿ ವಿ.ತಡಕಲ್, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಮಹಾಂತಪ್ಪ ಬದ್ದೋಲಿ, ಚನ್ನಬಸವ ಹುಲಿ ಪಾಟೀಲ, ಬಸವರಾಜ ನಿರ್ಣಾ, ಪ್ರಮೋದ ಕಾಂಬಳೆ, ಅಭಿಶೇಖ ಯಾದಗಿರ, ಅಂಬಾರಾಯ ಬಿರಾದಾರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…