ಬಿಸಿ ಬಿಸಿ ಸುದ್ದಿ

ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ

ಕಲಬುರ್ಗಿ: ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಭಟ್ಕಳ ಸಮಿತಿ ವತಿಯಿಂದ. ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾವು ದೇಶದ ಜನತೆ ಎದುರಿಸುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ದೇಶದ ಯುವಜನತೆಯ ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಮಾನ್ಯ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದೆ.

ಇಂದು ನಮ್ಮ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೋರಿವೆ, ಅದರಲ್ಲಿ ಬಹುಮುಖ್ಯವಾಗಿ ಬೆಲೆ ಏರಿಕೆ ಮತ್ತು ನಿರುದ್ಯೋಗವಾಗಿದೆ. ಇದರಿಂದ ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ಚಿಂತಾಜನಕವಾಗಿದೆ. ಬಡಜನರು ಬಳಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಆದಾಯ ಪಾತಾಳಕ್ಕೆ ಕುಸಿದಿದೆ.

ಅಕ್ಸ್ ಫರ್ಡ್ ಬಡತನ ಮತ್ತು ಅಭಿವೃದ್ಧಿ ಉಪಕ್ರಮ (OPHI) ಮತ್ತು ಜಾಗತಿಕ ಬಹು ಆಯಾಮದ ಬಡತನ ಸೂಚoಕ್ಯ (UNDP) 2021ರ ವರದಿಯ ಪ್ರಕಾರ ಸುಮಾರು 22.5% ಭಾರತೀಯರು ಅತ್ಯಂತ ಬಡವರಾಗಿದ್ದಾರೆ. ನಿತ್ಯ ಬದುಕಿನ ಖರ್ಚಿಗೆ 160 ರೂಪಾಯಿಗೂ ಕಷ್ಟ ಪಡುತ್ತಿದ್ದಾರೆ.

ಅರ್ಹತೆಗೆ ತಕ್ಕಂತೆ ಉದ್ಯೋಗ ಸಿಗದೇ ಯುವಕರಲ್ಲಿ ಆತ್ಮಹತ್ಯೆಗಳ ಸಂಖ್ಯೆಯೂ ಕಳೆದ ಎರಡು ವರುಷದಲ್ಲಿ 24% ಹೆಚ್ಚಳವಾಗಿದೆ. 2017 ರಲ್ಲಿ 6% ಇದ್ದ ನಿರುದ್ಯೋಗ ದರ ಜನವರಿ ಯಿಂದ ಮಾರ್ಚ್ 2022 ಮಧ್ಯೆ 8.2% ಏರಿದೆ. CMIE ವರದಿಯ ಪ್ರಕಾರ ಡಿಸೆಂಬರ್ 2021 ರಲ್ಲಿ ನಿರುದ್ಯೋಗಿಗಳ ಸಂಖ್ಯೆ 53 ದಶಲಕ್ಷ ವಾಗಿತ್ತು.

ಜನವರಿ-ಏಪ್ರಿಲ್ CMIE ವರದಿಯ ಪ್ರಕಾರ 20-24 ವಯಸ್ಸಿನ ನಿರುದ್ಯೋಗಿಗಳ ಸಂಖ್ಯೆ 2 ಕೋಟಿ 92 ಸಾವಿರ (42%), 25-29 ವಯಸ್ಸಿನ ನಿರುದ್ಯೋಗಿಗಳ ಸಂಖ್ಯೆ 6 ಕೋಟಿ 8 ಸಾವಿರ (12.72%) ಆಗಿತ್ತು. ಹೀಗೆ ಬೆಲೆ ಏರಿಕೆ ಮತ್ತು ನಿರುದ್ಯೋಗದ ಅಂಕಿ-ಅಂಶ ನೋಡುತ್ತಾ ಹೋದರೆ ನಮ್ಮ ದೇಶದಲ್ಲಿ ಆರ್ಥಿಕ ಸಂಕಷ್ಟದ ಅತಿ ದೊಡ್ಡ ಸಂಕೇತ ಕಂಡು ಬರುತ್ತದೆ.

ಜನಸಾಮಾನ್ಯರು ಅತ್ಯಂತ ಕಠಿಣ ಜೀವನ ನಡೆಸುತ್ತಿದ್ದರೂ ಸರಕಾರ ಮಾತ್ರ ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ, ಬದಲಿಗೆ ಈ ದೇಶದ ಬಂಡವಾಳಶಾಹಿ ಉದ್ಯಮಿಗಳಿಗೆ ದೇಶದ ಸಂಪತ್ತನ್ನು ಲೂಟಿ ಮಾಡಿ ಇನ್ನಷ್ಟೂ ಶ್ರೀಮಂತರು ಆಗುವಲ್ಲಿ ನೆರವು ಆಗುತ್ತಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

4 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

5 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

6 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

8 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

8 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420