ಇತಿಹಾಸದಲ್ಲಿ ವಲ್ಲಾಬಾಯಿ ಪಟೇಲ್ ಹೆಸರು ಅಜರಾಮರ

ಶಹಾಬಾದ: ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಸರ್ದಾರ ವಲ್ಲಾಬಾಯಿ ಪಟೇಲ್ ಹೆಸರು ಭಾರತದ ಇತಿಹಾಸದಲ್ಲಿ ಎಂದೆಂದೂ ಅಜರಾಮರ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ಹೇಳಿದರು.

ಅವರು ಸೋಮವಾರ ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆ ಹಾಗೂ ಪ್ರಕಾಶ ಅಂಬೇಡ್ಕರ್ ಪ್ರೌಢಶಾಲೆಯ ವತಿಯಿಂದ ಏಕತಾ ದಿನಾಚರಣೆಯ ನಿಮಿತ್ತÁಯೋಜಿಸಲಾದ ಶಾಲಾ ಮಕ್ಕಳಿಂದ ಏಕತಾ ಓಟದಲ್ಲಿ ಪಾಲ್ಗೊಂಡು ಮಾತನಾಡಿದರು.

ತಮ್ಮ ಜೀವನವನ್ನು ದೇಶಕ್ಕೆ ಸಮರ್ಪಿಸಿದ ಪಟೇಲರ್ ಕೊಡುಗೆಯನ್ನು ಎಂದಿಗೂ ಮರೆಯುವುದಿಲ್ಲ. ಹರಿದು ಹೋದ ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಿಸುವಲ್ಲಿ ಪಟೇಲರ ಪಾತ್ರ ಹಿರಿದು ಎಂದು ಬಣ್ಣಿಸಿದರು.

ಸರಕಾರಿ ಪ್ರೌಢಶಾಲೆಯ ಮುಖ್ಯಗುರು ಶಂಕರ ಜಾಧವ ಹಾಗೂಪ್ರಕಾಶ ಅಂಬೇಡ್ಕರ್ ಶಾಲೆಯ ಮುಖ್ಯಗುರು ಚಂದ್ರಶೇಖರ ಗಾರಂಪಳ್ಳಿ ಮಾತನಾಡಿ,ಬಲಿಷ್ಠ,ಸ್ವಾಭಿಮಾನಿ, ಸ್ವಾವಲಂಬಿ ಭಾರತವನ್ನು ಇಡೀ ವಿಶ್ವ ತಲೆ ಎತ್ತಿನೋಡುವಂತೆ ಕಟ್ಟಿದವರು ಪಟೇಲರು. ಅವರ ಬಡವರ ಬಗೆಗಿನ ಕಾಳಜಿ, ದೇಶಪ್ರೇಮ, ದಿಟ್ಟನಿರ್ಧಾರ ಕೈಗೊಳ್ಳುವ ಆತ್ಮಶಕ್ತಿ ಎಲ್ಲ ಕಾಲದ ರಾಜಕೀಯ ಕಟ್ಟಾಳುಗಳಿಗೆ ಮಾದರಿ ಎಂದರು.

ಶಿಕ್ಷಕರಾದ ಅನುದಾನಿತ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘದ ಅಧ್ಯಕ್ಷ ಪ್ರವೀಣ ಹೇರೂರ,ಶಾಂತಮಲ್ಲ ಶಿವಭೋ, ದತ್ತಪ್ಪ ಕೋಟನೂರ್, ಎನ್.ಡಿ.ಜಕಾತೆ,ಅನೀಲಕುಮಾರ,ವಿಷ್ಣತೀರ್ಥ ಆಲೂರ, ಸೀತಮ್ಮ.ಎನ್,ಶಶಿಕಲಾ.ಕೆ, ಪಾಯಣಪ್ಪ ಜೈನ್, ಶರಣಮ್ಮ ಪುರಾಣಿಕ್,ಸುರೇಶ ಕಾಂಬಳೆ,ಗುರುಶಾಂತಪ್ಪ ನಾಟೇಕಾರ,ಸುನಂದಾ ಕುಮಸ್ತೆ, ಸತೀಶಕುಮಾರ ನವಲೆ, ಅರ್ಚನಾ ಸೇರಿದಂತೆ ಶಾಲಾಮಕ್ಕಳು ಏಕತಾ ಓಟದಲ್ಲಿ ಭಾಗವಹಿಸಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

8 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420