ಸುರಪುರ: ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಿಬ್ಬಂದಿಗಳ ನೂತನ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಸಾರಿಗೆ ಸಚಿವ ಶ್ರೀರಾಮುಲು ಚಾಲನೆ ನೀಡಿದರು.ಸೋಮವಾರ ನಗರಕ್ಕೆ ಭೇಟಿ ನೀಡಿದ ಅವರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಗುದ್ದಲಿ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಆನೆ ಕಾಲು ರೋಗ ನಿರ್ಮೂಲನೆಯ ಅಂಗವಾಗಿ ನಡೆಯಲಿರುವ ಉಚಿತ ಮಾತ್ರೆ ನುಂಗಿಸುವ ಅಭಿಯಾನಕ್ಕೂ ಚಾಲನೆ ನೀಡಿ ಪೂಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀರಾಮುಲು ಅವರು,ಸರಕಾರ ಸರ್ವ ಜನರ ಅಭೀವೃಧ್ಧಿಗಾಗಿ ನಿರಂತರವಾಗಿ ಕೆಲಸ ಮಾಡುತ್ತದೆ ಎಂದರು.ಅಲ್ಲದೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಎಸ್ಸಿ,ಎಸ್ಟಿ ಮೀಸಲು ಪ್ರಮಾಣ ಹೆಚ್ಚಳದ ಕುರಿತು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿ,ರಾಜ್ಯದಲ್ಲಿನ ಎಸ್ಸಿ,ಎಸ್ಟಿ ಮೀಸಲು ಹೆಚ್ಚಳಕ್ಕೆ ಕಳೆದ 4 ದಶಕಗಳಿಂದ ಹೋರಾಟ ನಡೆಸಲಾಗಿತ್ತು,ಅಲ್ಲದೆ ಸಮುದಾಯಕ್ಕಾಗಿ ನಮ್ಮ ಸ್ವಾಮೀಜಿಯವರು, ನಾವು,ರಾಜುಗೌಡ್ರು ಎಲ್ಲರು ಶ್ರಮಿಸುತ್ತಿದ್ದೇವು ಅಲ್ಲದೆ ನನ್ನ ಸಹೋದರ ರಾಜುಗೌಡ ಅನೇಕ ಬಾರಿ ಸದನದಲ್ಲಿ ಧ್ವನಿ ಎತ್ತಿದ್ದಾರೆ,ಅಲ್ಲದೆ ನನ್ನನ್ನು ಟೀಕಿಸಿದ್ದಾರೆ,ಅವರು ನನ್ನನ್ನು ಟೀಕಿಸಿದ್ದರಲ್ಲಿ ಸ್ವಾರ್ಥ ಇರಲಿಲ್ಲ,ಆಗ ಟೀಕಿಸಿದ್ದರು,ಈಗ ಅವರೆ ಸನ್ಮಾನಿಸಿದ್ದಾರೆ,ಇದೆಲ್ಲವು ಸಮುದಾಯಕ್ಕಾಗಿ ಮಾಡಿರುವುದು ಎಂದರು.ಆದರೆ ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ನಮ್ಮ ಸರಕಾರವೇ ಬರಬೇಕಾಯಿತು.ಅದರ ಕ್ರೇಡಿಟ್ಕೂಡ ಸರಕಾರಕ್ಕೆ,ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಸಲ್ಲುತ್ತದೆ ಎಂದರು.
ಶಾಸಕ ರಾಜುಗೌಡ ಮಾತನಾಡಿ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗಾಗಿ ಗೃಹ ನಿರ್ಮಾಣ ಅನೇಕ ದಿನಗಳಿಂದ ಯೋಜನೆ ಉಳಿದುಕೊಂಡಿತ್ತು. ಇಂದು 1 ಕೋಟಿ 71 ಲಕ್ಷ ರೂಪಾಯಿಗಳಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.ಅಲ್ಲದೆ ರಾಜ್ಯದಲ್ಲಿನ ಎಸ್ಸಿ,ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಿಸಲು ಶ್ರೀರಾಮುಲು ಅಣ್ಣಾ ಅವರು ಹಿಂದೆ ಮಾತು ಕೊಟ್ಟಂತೆ ಹೆಚ್ಚಿಸಲು ಶ್ರಮಿಸಿ ಇಡೀ ಸಮುದಾಯದ ಮೆಚ್ಚುಗೆಗಳಿಸಿದ್ದಾರೆ.ಅಲ್ಲದೆ ಅದಕ್ಕಾಗಿ ಶ್ರೀರಾಮುಲು ಅಣ್ಣಾ ಹಾಗೂ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ನಗರಸಭೆ ಅಧ್ಯಕ್ಷ ಸುಜಾತಾ ವಿ.ಜೇವರ್ಗಿ,ಉಪಾಧ್ಯಕ್ಷ ಮಹೇಶ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ,ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ ಸೇರಿದಂತೆ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…