ಅಲೆಮಾರಿ ಹೆಳವ ಸಮಾಜದ ತಿಪ್ಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿ

0
23

ಕಲಬುರಗಿ: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 67 ಮಂದಿ ಸಾಧಕರಿಗೆ 2022 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

ಆರು ದಶಕಗಳ ಕಾಲ ಸೇವೆಗೈದ ಅಲೆಮಾರಿ ಹೆಳವ ಸಮುದಾಯದ ಹಿರಿಯ ರಂಗಭೂಮಿ ಬಯಲಾಟ ಕಲಾವಿದ, ಜನಪದ ಗಾಯಕ ತಿಪ್ಪಣ್ಣ ಶಿವಲಿಂಗಪ್ಪ ಹೆಳವರ ಲಕ್ಕುಂಡಿಯವರ ಪ್ರತಿಭೆಯನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಹೆಮ್ಮೆಯ ಸಂಗತಿ ಎಂದು ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ಸಮುದಾಯದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here