ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಗೌ. ಕೆ.ಬಿ. ಪಾಟೀಲ್ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಕನ್ನಡದ ಕಂಪನ್ನು ಸೋಸುವ ಹಾಗೂ ಜ್ಞಾನದ ಸಂಕೇತವಾಗಿರುವ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕನ್ನಡವನ್ನು ಮನೆ ಮನೆಗಳಲ್ಲಿ ಪಸರಿಸಿ ಬೆಳೆಯುವ ಮಕ್ಕಳಲ್ಲಿ ಮಾತೃ ನುಡಿಯ ಹಿರಿಮೆ ತಿಳಿಸುವುದರ ಮೂಲಕ ಕನ್ನಡದ ಕಂಪನ್ನು ಎಲ್ಲಾ ಕಡೆ ಹರಡಿಸಬೇಕೆಂದು ಕರೆ ನೀಡಿದರು.
ಇನ್ನೋರ್ವ ಅಥಿತಿಗಳಾಗಿ ಆಗಮಿಸಿದ ಗೌ. ನ್ಯಾಯಾಧೀಶರಾದ ಸುಶಾಂತ್ ಚೌಗಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ, ಕಲಬುರಗಿರವರು ಮಾತನಾಡುತ್ತಾ, ಜೇನಿನ ಹನಿಯಷ್ಟು ಸಿಹಿ ಕೋಗಿಲೆಯ ದನಿಯಷ್ಟು ಸವಿಯಾದ ನಮ್ಮ ಕನ್ನಡ ನುಡಿ ಇದು ಎಲ್ಲರ ನುಡಿಯಾಗಿದೆ. ನುಡಿದರೆ ಮುತ್ತಿನ ಹಾರದಂತೆ ಇರುಬೇಕು, ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು ಎಂದು ತಮ್ಮ ಮಾತಿನಲ್ಲಿ ಕನ್ನಡದ ಸವಿಯನ್ನು ಕೊಂಡಾಡಿದರು.
ಈ ಸಂಸ್ಥೆಯ ಮುಖ್ಯಸ್ಥರಾದ ಡಾ. ಪಿ. ರಂಗನಾಥ್, ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ ಕಲಬುರಗಿ ಇವರು ಮಾತನಾಡುತ್ತಾ, “ಕನ್ನಡವೇ ನಮ್ಮ ಉಸಿರು, ಕನ್ನಡವೇ ನಮ್ಮ ಹಸಿರು” ಕನ್ನಡವು ಭಾಂದವ್ಯದ ಬೆಸುಗೆಯಾಗಿ, ಸಂಸ್ಕøತಿಯ ಸೊಗಡಾಗಿ ಕಸ್ತೂರಿಯ ಕಂಪಾಗಿ ಎಲ್ಲರು ಕಾರಾಗೃಹದಲ್ಲಿರುವ ಇತರೇ ಭಾಷೆ ಮಾತನಾಡುವವರನ್ನು ಕನ್ನಡವನ್ನು ಕಲಿಸಿ ಅವರು ಕನ್ನಡವನ್ನು ಬಳಸಿ ಕನ್ನಡವನ್ನು ಉಳಿಸಿ ಬೆಳಸಬೇಕೆಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಅಧೀಕ್ಷಕರಾದ ಬಿ.ಎಂ. ಕೊಟ್ರೇಶ್, ಕೇಂದ್ರ ಕಾರಾಗೃಹ ಕಲಬುರಗಿ, ವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಬನ್ನೇರಿ, ಡಾ. ಅಣ್ಣಾರಾವ್ ಪಾಟೀಲ್, ಕೇಂದ್ರ ಕಾರಾಗೃಹ ಕಲಬುರಗಿ, ವಿ.ಕೃಷ್ಣಮೂರ್ತಿ, ಸಹಾಯಕ ಅಧೀಕ್ಷಕರು, ಕೇಂದ್ರ ಕಾರಾಗೃಹ ಕಲಬುರಗಿ, ಕೆ.ಎಸ್.ಐ.ಎಸ್.ಎಫ್ ಅಧಿಕಾರಿಗಳಾದ ಕೆ. ಮಾರನೂರ, ಬಾಬು ಗುತ್ತೇದರ್ ಜೈಲರ್ ವೃಂದದವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಹಾಗೂ ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದರು.
ಕಾರ್ಯಕ್ರಮದ ಸ್ವಾಗತ ಕಾರ್ಯಕ್ರಮವನ್ನು ಮತಿ ಮಹಾದೇವಿ, ಸೈಕ್ಯಾಟ್ರಿಕ್ ಕೌನ್ಸಲರ್, ಕೇಂದ್ರ ಕಾರಾಗೃಹ ಕಲಬುರಗಿ, ಪ್ರಾರ್ಥಾನಾ ಗೀತೆಯನ್ನು ವಾರ್ಡರ್ ಸಿಬ್ಬಂದಿಯಾದ ಕು. ರುದ್ರವ್ವ ಹಾಡಿದರು. ವಂದನಾರ್ಪಣೆಯನ್ನು ಪುಂಡಲಿಂಗ ಹಳ್ಳೂರ ನಡೆಸಿಕೊಟ್ಟರು. ನಿರೂಪಣೆಯನ್ನು ಈ ಸಂಸ್ಥೆಯ ಶಿಕ್ಷಕರಾದ ನಾಗಾರಾಜ ಮುಲಗೆ ನೇರವೆರಿಸಿದರು. ಅಧಿಕಾರಿ/ಸಿಬ್ಬಂದಿ ಹಾಗೂ ಬಂದಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…