ಕರವೇ ರಾಜ್ಯೋತ್ಸವ: ಭುವನೇಶ್ವರಿ ಭಾಚಿತ್ರ ಮೆರವಣಿಗೆಗೆ ಚಾಲನೆ

0
7

ಸುರಪುರ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ದಿಂದ ಹಮ್ಮಿಕೊಂಡಿರುವ 18ನೇ ವರ್ಷದ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಕನ್ನಡ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

ನಗರದ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಸುರಪುರ ಅರಸು ವಂಶಸ್ಥ ರಾಜಾ ಲಕ್ಷ್ಮೀನಾರಾಯಣ ನಾಯಕ ಹಾಗೂ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಚಾಲನೆ ನೀಡಿದರು.

Contact Your\'s Advertisement; 9902492681

ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ,ನಯೋಪ್ರಾ ಅಧ್ಯಕ್ಷ ಪ್ರಕಾಶ ಸಜ್ಜನ್,ಮುಖಂಡರಾದ ಬಲಭೀಮ ನಾಯಕ ಬೈರಿಮಡ್ಡಿ,ಶರಣು ನಾಯಕ ಬೈರಿಮಡ್ಡಿ,ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ,ಜಿ.ಸಂ ಕಾರ್ಯದರ್ಶಿ ಭೀಮು ನಾಯಕ ಮಲ್ಲಿಬಾವಿ,ತಾ.ಗೌರವಾಧ್ಯಕ್ಷ ವೆಂಕಟೇಶ ನಾಯಕ ಪ್ಯಾಪ್ಲಿ,ರವಿ ನಾಯಕ ಬೈರಿಮಡ್ಡಿ,ರಾಘವೇಂದ್ರ ಭಕ್ರಿ ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.

ನಗರದ ಮಹಾತ್ಮ ಗಾಂಧಿ ವೃತ್ತ,ದರಬಾರ ರಸ್ತೆ ಮಾರ್ಗವಾಗಿ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದ ಮೂಲಕ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದ ವರೆಗೆ ಮೆರವಣಿಗೆ ನಡೆಸಲಾಯಿತು. ವಿವಿಧ ಕಲಾ ತಂಡಗಳು ಭಾಗವಹಿಸಿದ್ದು,ಮೆರವಣಿಗೆಯುದ್ದಕ್ಕೂ ಕನ್ನಡ ಧ್ವಜ ರಾರಾಜಿಸಿದವು ಹಾಗೂ ಕನ್ನಡಪರ ಘೋಷಣೆಗಳು ಮುಗಿಲು ಮುಟ್ಟಿದ್ದವು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here