ಕಲಬುರಗಿ: ನಗರದ ಸರದಾರ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ಜೈ ಕನ್ನಡಿಗರ ಸೇನೆಯ ನೆತೃತ್ವದಲ್ಲಿ ಆಯೋಜಿಸಿದ್ದ ತಾಯಿ ಭುವನೇಶ್ವರಿ ದೇವಿಯ ಪೂಜೆ ಮತ್ತು 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶ್ರೀ ನಾಗೇಶ ಸ್ವಾಮಿಜೀ ಚಾಲನೆ ನೀಡಿದರು.
ಎಂ.ಎಲ್.ಸಿ ಶಶೀಲ ನಮೋಶಿ, ಮಾಜಿ ಎಂ.ಎಲ್.ಸಿ ಅಲ್ಲಮಪ್ರಭು ಪಾಟೀಲ ನೆಲೋಗಿ, ಮಾಜಿ ಮೇಯರ ಶರಣು ಮೋದಿ, ಜೈಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಚ್.ಭಾಸಗಿ, ಹೋರಾಟಗಾರ ಲಕ್ಷ್ಮಣ ದಸ್ತಿ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಇದ್ದರು.