ಆಳಂದ : ಭೂಸನೂರ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಯವರು ಪ್ರತಿ ಟನ್ ಕಬ್ಬಿಗೆ 2500 ನೀಡಲು ಕಾರ್ಖಾನೆ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಸಕ್ಕರೆ ಸಚಿವರಿಗೆ ಮನವಿ ಮಾಡಿದ್ದಾರೆ.
ಬುಧುವಾರ ಬೆಂಗಳೂರಿನಲ್ಲಿ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರನ್ನು ಭೇಟಿ ಮಾಡಿ, ಭೂಸನೂರ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಯುವ ರೈತರ ಪ್ರತಿ ಟನ್ ಕಬ್ಬಿಗೆ 2300 ರೂ ಕೊಡುತ್ತಿದ್ದಾರೆ, ಆದರೆ ಸಮೀಪದ ರೇಣುಕಾ ಸಕ್ಕರೆ ಕಾರ್ಖಾನೆಯವರು 2500 ರೂ ಕೊಡುತ್ತಿದ್ದಾರೆ ಆದ್ದರಿಂದ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಯವರು ಕೂಡ 2500 ರೂ ಗೆ ಹೆಚ್ಚಳ ಮಾಡಿಸಬೇಕೆಂದು ಅವರಲ್ಲಿ ಮನವಿ ಮಾಡಿದರು.