ಕಲಬುರಗಿ: ಎಸ್ಟಿ ಪಟ್ಟಿಯಲ್ಲಿರುವ ತಳವಾರ ಮತ್ತು ಪರಿವಾರ ನಾಯಕ್ ಜಾತಿಗಳಿಗೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಪ್ರಮಾಣ ಪತ್ರ ನೀಡುವಲ್ಲಿ ತೊಂದರೆ ಮತ್ತು ವಂಚನೆ ಮಾಡುತ್ತಿದ್ದು, ಆ ತೊಂದರೆಯನ್ನು ನಿವಾರಿಸಿ ಪ್ರಮಾಣ ಪತ್ರ ವಿತರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಬುಡುಕಟ್ಟು ಸಂರಕ್ಷಣಾ ಸಮಿತಿ ಸಂಘದ ಅಮರೇಶ ಕಾಮನಕೇರಿ ಆಗ್ರಹಿಸಿದರು.
1987ರಿಂದ ನಾಯ್ಕಡ ಪರ್ಯಾಯ ಪದವಾಗಿ ಎಸ್ಟಿ ಸೇರ್ಪಡೆಯಾಗಿ ಎಸ್ಟಿ ಪ್ರಮಾಣ ಪತ್ರ ಪಡೆಯಲು ನಿರಂತರ ಹೋರಾಟ ಮಾಡಿ 2020ರಲ್ಲಿ ನಾಯ್ಕಡದ ಪರ್ಯಾಯ ಪದವಾಗಿ ಎಸ್ಟಿ ಸೇರ್ಪಡೆಯಾಗಿರುವ ತಳವಾರ ಜಾತಿ ಜನಾಂಗದವರಿಗೆ ತ್ವರಿತವಾಗಿ ಎಸ್ಟಿ ಪ್ರಮಾಣಪತ್ರ ವಿತರಣೆಯಾಗಬೇಕು ಎಂದು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ತಳವಾರ ಜಾತಿ ಜನಾಂಗದವರು ಅರ್ಜಿ ಸಲ್ಲಿಸುವಾಗ ನಾಯ್ಕಡ (ಪರಿವಾರ, ತಳವಾರ) ಎಂದು ತಂತ್ರಾಶದಲ್ಲಿ ಅರ್ಜಿ ಸಲ್ಲಿಸಬೇಕೆಂದು ಮನವಿ ಮಾಡಿದರು. ಮಹಾದೇವಪ್ಪ ಜಮಾದಾರಮ ಡಾ. ಹಣಮಂತ ಎಸ್.ಡಿ., ಸಿದ್ದರಾಮ ತಳಹಳ್ಳಿ, ರಾಮು ಚೆನ್ನೂರ ಮತ್ತಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…