ಕರವೇ 18ನೇ ವರ್ಷದ ರಾಜ್ಯೋತ್ಸವ ಅಂಗವಾಗಿ ಸುರಪುರ ಉತ್ಸವ

ಸುರಪುರ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ ನಾರಾಯಣಗೌಡ ಬಣ) ದಿಂದ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಲ್ಲಿ 18ನೇ ವರ್ಷದ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಹಾಗೂ ಶ್ರೀ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಹವ್ಯಾಸಿ ಕಲಾವಿದರ ಸಂಘ ಸುರಪುರ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸುರಪುರ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಹಣಮಂತ ನಾಯಕ (ಬಬ್ಲುಗೌಡ) ಉದ್ಘಾಟಿಸಿದರು,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿವಿಧ ರಂಗಗಳಲ್ಲಿ ಸಾಧನೆಗೈದ 11 ಜನ ಸಾಧಕರಾದ ಡಿವೈಎಸ್ಪಿ ಮಂಜುನಾಥ ಟಿ,ವೈದ್ಯಾಧಿಕಾರಿ ಡಾ:ವಿ.ಎಲ್ ಚೌಧರಿ,ಬಾಲಕರ ಕಾಲೇಜು ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ,ಪತ್ರಕರ್ತ ಮಲ್ಲು ಗುಳಗಿ,ಪರಶುರಾಮ ಮಲ್ಲಿಬಾವಿ,ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ,ಪ್ರಗತಿಪರ ರೈತ ಮುದಿಗೌಡ ಮಾಲಿಪಾಟೀಲ್,ಹಣಮಂತ್ರಾಯ ಬಿರಾದಾರ,ನಗನೂರ ಪಿಡಿಓ ಶ್ರೀಶೈಲ ಬಿ.ಹಳ್ಳಿ ಹಾಗೂ ತಬಲಾ ವಾದಕ ರಮೇಶ ಕುಲಕರ್ಣಿ ಇವರುಗಳಿಗೆ ಕುವೆಂಪು ಪ್ರಶಸ್ತಿ ಪ್ರದಾನ ಮಾಡಲಾಯಿತು.ಅಲ್ಲದೆ ವಿಶೇಷ ಸನ್ಮಾನಿತರನ್ನಾಗಿ ಅತ್ಯೂತ್ತಮ ತಾಲೂಕು ಆರೋಗ್ಯಾಧಿಕಾರಿ ಪ್ರಶಸ್ತಿ ಪಡೆದ ಡಾ:ಆರ್.ವಿ ನಾಯಕ,ಅಕಾಡಮಿ ಬಾಲಗೌರವ ಪ್ರಶಸ್ತಿ ಪಡೆದ ಕುಸುಮಾ ಅಯ್ಯಣ್ಣ ಬೋಯಿ,ಕೃಷಿ ಪಂಡೀತ ಡಾ:ಕಿರಣ ಜಕರಡ್ಡಿ,ಮುಖ್ಯ ಪೊಲೀಸ್ ಪೇದೆ ಸಾಯಬಣ್ಣ ಅಂಬ್ಲಿಹಾಳ,ರಾಷ್ಟ್ರೀಯ ಖೋ ಖೋ ಕ್ರೀಡಾ ಪ್ರಶಸ್ತಿ ಪುರಸ್ಕøತ ಮರೆಪ್ಪ ಗುರಿಕಾರ ದೇವರಗೋನಾಳ ಇವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಮಂಗಳವಾರ ಮದ್ಹ್ಯಾನ ನಡೆದ ಶಾಲಾ ಮಕ್ಕಳ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಖುರೇಷಿ ಮೊಹಲ್ಲಾ ಶಾಲೆ ಮಕ್ಕಳಿಗೆ ಹಾಗೂ ದ್ವೀತಿಯ ಬಹುಮಾನ ಪಡೆದ ದರಬಾರ ಶಾಲಾ ಮಕ್ಕಳಿಗೆ ಸನ್ಮಾನಿಸಿ ಬಹುಮಾನ ವಿತರಣೆ ಮಾಡಲಾಯಿತು.

ನಂತರ ನಡೆದ ಸಾಂಸ್ಕøತಿ ಕಾರ್ಯಕ್ರಮದಲ್ಲಿ ಸರಿಗಮಪ ಖ್ಯಾತಿಯ ಸುಹಾನಾ ಸಯ್ಯದ್,ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಿತ್ರ ನಟ ಅಪ್ಪಣ್ಣ,ನಂದಿನಿ ಜಾಧವ್,ಚೈತ್ರಾ ಇವರುಗಳಿಂದ ಗಾಯನ ಹಾಗೂ ಹಾಸ್ಯ ಕಾರ್ಯಕ್ರಮ ನಡೆಸಲಾಯಿತು ಹಾಗೂ ಜೂ:ಉಪೇಂದ್ರ ಅವರ ಕಲಾ ತಂಡ ಮತ್ತು ಸ್ಥಳಿಯ ಸಗರ ನಾಡು ಸಂಗೀತ ಕಲಾವಿದರಿಂದ ಸಂಗೀತೋತ್ಸವ ಕಾರ್ಯಕ್ರಮ ಜರುಗಿತು.ಇದೇ ಸಂದರ್ಭದಲ್ಲಿ ಯೋಗಪಟು ಅವನಿ ಸುಳ್ಯ ನಡೆಸಿಕೊಟ್ಟ ಯೋಗ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಶಂಕರ ನಾಯಕ,ಬಲಭೀಮ ನಾಯಕ ಬೈರಿಮಡ್ಡಿ,ಮಲ್ಲಿಕಾರ್ಜುನ ಸತ್ಯಂಪೇಟೆ,ಟಿ.ಎನ್ ಭೀಮುನಾಯಕ,ನರಸಿಂಹಕಾಂತ ಪಂಚಮಗಿರಿ,ಮಾನಪ್ಪ ಚಳ್ಳಿಗಿಡ,ಶರಣು ನಾಯಕ ಬೈರಿಮಡ್ಡಿ,ಮಂಜುನಾಥ ನಾಯಕ ಬೈರಿಮಡ್ಡಿ,ರವಿ ನಾಯಕ ಬೈರಿಮಡ್ಡಿ ವೇದಿಕೆಯಲ್ಲಿದ್ದರು.ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ನೇತೃತ್ವ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಉಪನ್ಯಾಸಕ ದೇವು ಹೆಬ್ಬಾಳ,ಖಾನಾಬಾಯಿ ಹೊಸಗೌಡ್ರ ನಿರೂಪಿಸಿದರು,ಮಲ್ಲಿಕಾರ್ಜುನ ಹಿರೇಮಠ ಪರಸನಹಳ್ಳಿ ಸ್ವಾಗತಿಸಿದರು,ಶ್ರೀಶೈಲ ಕಾಚಾಪುರ ವಂದಿಸಿದರು.ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಕರವೇ ಕಾರ್ಯಕರ್ತರು ಹಾಗೂ ನಗರದ ಅನೇಕ ಜನ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

4 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

5 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

7 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

18 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

20 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420