ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ತಾಲೂಕಿನ ಶಂಕರವಾಡಿ ಕಾಗಿಣಾ ನದಿಗೆ ಬಿದ್ದಿದ್ದು, ಬಸ್ಸಿನಲ್ಲಿದ್ದ ಸುಮಾರು 43 ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಚಿತ್ತಾಪೂರ ಘಟಕಕ್ಕೆ ಸೇರಿದ್ದ ಬಸ್ ಜೇವರ್ಗಿಯಿಂದ ಶಹಾಬಾದ ಬಸ್ ನಿಲ್ದಾಣಕ್ಕೆ ಬಂದಿತ್ತು.ನಂತರ ಶಹಾಬಾದ ಬಸ್ ನಿಲ್ದಾಣದಿಂದ ಚಿತ್ತಾಪುರಕ್ಕೆ ಪ್ರಯಾಣ ನಡೆಸುತ್ತಿದ್ದ ಸಾರಿಗೆ ಬಸ್, ಕಾಗಿಣಾ ಸೇತುವೆ ಮೇಲೆ ಪ್ರವೇಶಿಸುವ ಸಂದರ್ಭದಲ್ಲಿಯೇ ಎಕ್ಸೆಲ್ ಕಟ್ ಆಗಿ ಆಯತಪ್ಪಿ ಉರುಳಿ ಸೇತುವೆ ಮೇಲಿಂದ ಹೊಲದಲ್ಲಿ ಬಿದ್ದಿದೆ. ಅದೃಷ್ಟವಶ ಸೇತುವೆಯ ಮಧ್ಯದಲ್ಲಿ ಬಿದ್ದಿದ್ದರೆ ಭಾರಿ ಪ್ರಮಾಣದಲ್ಲಿ ಜೀವ ಹಾನಿ ಸಂಭವಿಸುವ ಸಾಧ್ಯತೆಯಿತ್ತು. ಆದರೆ ಬಸ್ ಸೇತುವೆ ಪ್ರಾರಂಭದಲ್ಲಿಯೇ ಬಲ ಭಾಗದ ಹೊಲದಲ್ಲಿ ಉರುಳಿ ಬಿದ್ದ ಪರಿಣಾಮ ಪ್ರಾಣಾಪಾಯ ತಪ್ಪಿದೆ.
ಬಿದ್ದ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರು ಭಯಬೀತರಾಗಿ .ಕಿಟಕಿ ಗಾಜುಗಳನ್ನು ಒಡೆದು ಹೊರ ಬಂದಿದ್ದಾರೆ. ಸ್ಥಳದಲ್ಲಿದ್ದ ವಿವಿಧ ವಾಹನಗಳ ಸಾರ್ವಜನಿಕರು ಪ್ರಯಾಣಿಕರ ಸಹಾಯಕ್ಕೆ ಬಂದಿದ್ದಾರೆ. ಪುರುಷರು-21, ಸ್ತ್ರೀಯರು-19, ಮಕ್ಕಳು-03 ಜನ ಸೇರಿದಂತೆ ಒಟ್ಟು 43 ಪ್ರಯಾಣಿಕರಿದ್ದರು. ಇದರಲ್ಲಿ ನಾಲ್ಕು ಜನರಿಗೆ ಗಂಬೀರ ಸ್ವರೂಪದ ಗಾಯಗಳಾಗಿವೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಅದರಲ್ಲಿ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 09 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಉಳಿದ ಜನರಿಗೆ ಅಂಬುಲೆನ್ಸ್ ಮೂಲಕ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕಳಿಸಿ ಕೊಡಲಾಗಿದೆ.
ಶಹಾಬಾದ್ ಮೂಲದ ಬಸ್ ಚಾಲಕ ಶಂಕರ ಮತ್ತು ನಿರ್ವಾಹಕ ಶ್ರೀನಿವಾಸ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಇಬ್ಬರಿಗೆ ಕಾಲಿನ ಹಾಗೂ ಕೈ ಮೂಳೆ ಮುರಿತಗೊಂಡಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಗರ ಪಿಐ ರಾಘವೇಂದ್ರ , ಪಿಎಸ್ಐ ಅಶೋಕ ಪಾಟೀಲ ಹಾಗೂ ಸಿಬ್ಬಂದಿಗಳು ಗಾಯಾಳುಗಳ ನೆರವಿಗೆ ಬಂದಿದ್ದಾರೆ.ಈ ಘಟನೆಯಿಂದ ಸೇತುವೆ ಮೇಲೆ ಸುಮಾರು 1 ಗಂಟೆ ಕಾಲ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಅಲ್ಲದೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಹಸೀಲ್ದಾರ ಸುರೇಶ ವರ್ಮಾ, ತಾಲೂಕಾ ಆರೋಗ್ಯ ಅಧಿಕಾರಿ ಅಮರದೀಪ ಪವಾರ ಬೇಟಿ ನೀಡಿ ಮಾಹಿತಿ ಪಡೆದರು. ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕಳಿಸಿಕೊಟ್ಟರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…