ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ: ಸಚಿವ ಹಾಲಪ್ಪ ಬಸಪ್ಪ ಆಚಾರ್

0
14

ಬೆಂಗಳೂರು: ʼಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು.

ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 2ರಿಂದ ಶುರುವಾದ ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವು ಅದ್ಧೂರಿಯಾಗಿ ನಡೆಯಿತು. ಸಮಾವೇಶದ ಎರಡನೇ ದಿನದಂದು (ನವೆಂಬರ್ 3,2022)ಆಯೋಜಿಸಲಾದ “ADVANCING GENDER DIVERSITY: JOURNEY POST SHATTERING THE GLASS CEILING” ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವ ಹಾಲಪ್ಪ ಬಸಪ್ಪ ಆಚಾರ್ ವಹಿಸಿದ್ದರು.

Contact Your\'s Advertisement; 9902492681

ʼಜಾಗತಿಕ ಹೂಡಿಕೆದಾರರ ಸಮಾವೇಶ – 2022ʼರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ʼಮಹಿಳಾ ಉದ್ದಿಮೆದಾರರು ಹಾಗೂ ಹಾಗೂ ಬೇರೆ ಬೇರೆ ವೃತ್ತಿಗಳಲ್ಲಿ ನಿರತವಾಗಿರುವ ಮಹಿಳೆಯರಿಗೆ ನಿರಂತರವಾಗಿ ಬೆಂಬಲ ಸಿಗುತ್ತಿದೆ. ಆದರೆ ಮಹಿಳಾ ನೇತೃತ್ವದ ಉದ್ಯಮಗಳ ಉಳಿವಿಗಾಗಿ ಬಂಡವಾಳ ಹಾಗೂ ಮಾರುಕಟ್ಟೆ ಒದಗಿಸುವ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ.

ಮಹಿಳೆಯರನ್ನು ಅನೌಪಚಾರಿಕ ವಲಯದಿಂದ ಹೊರತರಲು ಹಾಗೂ ಸುಸ್ಥಿರವಾದ ಮಹಿಳಾ ಕೇಂದ್ರಿತ MSME ವಲಯವನ್ನು ನಿರ್ಮಾಣ ಮಾಡುವ ದೃಷ್ಟಿಯಿಂದ ಆಧುನಿಕ ವಲಯಗಳಲ್ಲಿ ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಹೆಚ್ಚಿಸುವ ಅಗತ್ಯವಿದೆ. ಈಗಾಗಲೇ ತಮ್ಮ ಸಾಧನೆಯ ಮೂಲಕ ಕರ್ನಾಟಕ ಹಾಗೂ ದೇಶಕ್ಕೆ ಹೆಮ್ಮೆ ತಂದ ಎಲ್ಲ ಮಹಿಳಾ ಸಾಧಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆʼ ಎಂದು ಅವರು ಹೇಳಿದರು.

ಮೂರುದಿನಗಳ ಅವಧಿಯ ಈ ಸಮಾವೇಶದಲ್ಲಿ ರಾಷ್ಟ್ರ ಹಾಗೂ ಜಾಗತಿಕ ಮಟ್ಟದ ಪ್ರಮುಖ ಕೈಗಾರಿಕೋದ್ಯಮಿಗಳು, ಜಾಗತಿಕ ಮಟ್ಟದ ಭಾಷಣಕಾರರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕೈಗಾರಿಕಾ ಹಾಗೂ ವ್ಯಾಪಾರ ಸಂಘ ಸಂಸ್ಥೆಗಳು ಭಾಗವಹಿಸಿವೆ. ಹಾಗೇ ಸಮಾವೇಶದಲ್ಲಿ ಹಲವಾರು ಪ್ರಚಲಿತ ವಿಷಯಗಳ ಬಗ್ಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here