ಬಿಸಿ ಬಿಸಿ ಸುದ್ದಿ

ಹಾರಕೂಡ ಶ್ರೀಗಳ ಜನ್ಮದಿನ: 60 ಶಾಲೆಗಳಿಗೆ ಪುಸ್ತಕ ವಿತರಣೆ

ಕಲಬುರಗಿ: ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕøತಿ, ಶಿಕ್ಷಣ, ಜ್ಞಾನ ಇವುಗಳ ಉನ್ನತಿಗಾಗಿ ನಿತ್ಯ ನಿರಂತರವಾಗಿ ಶ್ರಮಿಸುತ್ತಿರುವವರು ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು. ಸಾಹಿತ್ಯ ಕ್ಷೇತ್ರಕ್ಕೆ ಬಹು ದೊಡ್ಡ ಕೊಡುಗೆ ಕೊಟ್ಟ ಹಾರಕೂಡದ ಶ್ರೀಗಳು ಸರ್ವ ಜನಾಂಗದವರನ್ನು ಸಮಾನತೆಯಿಂದ ಕಾಣುತ್ತಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಹಾರಕೂಡ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರ 60 ನೇ ವರ್ಷದ ಜನ್ಮದಿನದಂಗವಾಗಿ ಶುಕ್ರವಾರ ನಗರದ ತಾರಫೈಲ್ ಏರಿಯಾದಲ್ಲಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸೇರಿದಂತೆ ವಿವಿಧ ಶಾಲಾ ಮಕ್ಕಳಿಗೆ ಮಹಾತ್ಮರ ಸಂದೇಶಗಳನ್ನೊಳಗೊಂಡ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಶ್ರೀಮಠದ ಪೂಜ್ಯರು ತಮ್ಮ ಮಠದಲ್ಲಿ ನಿತ್ಯ ನಿರಂತರ ಅನ್ನ ದಾಸೋಹ ನಡೆಸುವ ಮೂಲಕ ನಾಡಿಗೆ ಅಪ್ರತಿಮ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀಗಳ ಆಶೀರ್ವಾದದಿಂದ ಅನೇಕ ಕಲಾವಿದರು, ಬರಹಗಾರರು ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ ಎಂದರು.

ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಪ್ರಮುಖರಾದ ಎಸ್.ಎಂ.ಪಟ್ಟಣಕರ್, ರವೀಂದ್ರಕುಮಾರ ಭಂಟನಳ್ಳಿ, ಶಿವಕುಮಾರ ಸಿ.ಎಚ್., ಹಣಮಂತ ಮರಡಿ, ಶಿವರಾಜ ಬಿ.ಪಾಟೀಲ, ಸೂರ್ಯಕಾಂತ ಎ.ಪಾಟೀಲ, ಶಾರದಾಬಾಯಿ ಮಸೂತಿ, ಪ್ರಕಾಶ ಬಿ.ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

4 hours ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

5 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

5 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

6 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

6 hours ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

6 hours ago