ಸೇಡಂನಲ್ಲಿ ನಡೆಯಲಿರುವ ಅಖಿಲ ಭಾರತ ಸಹಕಾರ ಸಪ್ತಾಹ ಮಾದರಿಯಾಗಲಿ

0
81

69 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಲೋಗೋವನ್ನು ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರು ಬೆಂಗಳೂರಿನಲ್ಲಿ ಗುರುವಾರ ಬಿಡುಗಡೆಗೊಳಿಸಿದ್ದು, ಸಪ್ತಾಹ ಯಶಸ್ವಿಯಾಗಲೆಂದು ಕೋರಿದ್ದಾರೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಕಲಬುರಗಿ ಜಿಲ್ಲೆಯ ಸೇಡಂದಲ್ಲಿನ ಸಪ್ತಾಹ ಮಾದರಿಯಾಗಲಿ ಎಂದು ಶುಭ ಕೋರಿದ್ದಾರೆ ಎಂದು ಸಭೆಯಲ್ಲಿ ಶಾಸಕ ತೇಲ್ಕೂರ ತಿಳಿಸಿದರು.

ಕಲಬುರಗಿ: ರಾಷ್ಟ್ರಕೂಟರ ನಾಡು, ಸಾಂಸ್ಕೃತಿಕ ನಗರಿ ಸೇಡಂದಲ್ಲಿ ಬರುವ ನವ್ಹೆಂಬರ್ 14ರಂದು ನಡೆಯುವ 69 ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಮಾದರಿಯಾಗಿ ನಡೆಯಲು ನಾವೆಲ್ಲರೂ ಹಗಲಿರುಳು ಶ್ರಮಿಸಬೇಕಾಗಿದೆ ಎಂದು ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ – ಕೆಕೆಆರ್ ಟಿಸಿ ಅಧ್ಯಕ್ಷರಾಗಿರುವ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು.

Contact Your\'s Advertisement; 9902492681

ಅಖಿಲ ಭಾರತ ಸಹಕಾರಿ ಸಪ್ತಾಹ ಅಂಗವಾಗಿ ನಗರದ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ದತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ 50 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ವಿದೆ. ಹೀಗಾಗಿ ಶಿಸ್ತು ಬದ್ದ ಅಂದರೆ ಸಹಕಾರಿ ಶಿಕ್ಷಣ ತಿಳುವಳಿಕೆ, ಉತ್ತಮ ಅತಿಥಿ ಸತ್ಕಾರ ಹಾಗೂ ಸಾಂಸ್ಕೃತಿಕ ವಾಗಿ ನಡೆಸಲು ಉದ್ದೇಶಿಸಲಾಗಿದೆ. ಆದ್ದರಿಂದ ಸಹಕಾರಿ ಕ್ಷೇತ್ರದ ಎಲ್ಲ ಅಧಿಕಾರಿಗಳು, ಸಹಕಾರಿ ಕ್ಷೇತ್ರದ ಸದಸ್ಯರು ಸಪ್ತಾಹ ಯಶಸ್ವಿಗೆ ಸರ್ವ ನಿಟ್ಟಿನಲ್ಲಿ ಕೈ ಜೋಡಿಸಬೇಕೆಂದರು.

ಸಹಕಾರ ಸಪ್ತಾಹ ಮಾದರಿ ನಿಟ್ಟಿನಲ್ಲಿ ಈಗಲೇ ಅತಿಥಿ ಗೃಹಗಳನ್ನು ಕಾಯ್ದಿರಿಸುವುದು, ಸಾರಿಗೆ ವ್ಯವಸ್ಥೆ ಕಲ್ಪಿಸುವ, ಬಂದವರಿಗೆಲ್ಲರಿಗೂ ಉತ್ತಮ ಊಟ ಹಾಕಿಸುವ ಜತೆಗೆ ಉತ್ತಮ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.‌ಇಡೀ ಸಪ್ತಾಹ ಕ್ಕೆ ಕಿರೀಟ ಎನ್ನುವಂತ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವುದು ಕಾರ್ಯಸೂಚಿಗಳಾಗಿವೆ ಎಂದು ತೇಲ್ಕೂರ ವಿವರಣೆ ನೀಡಿದರು.

ಸಹಕಾರಿ ಸಪ್ತಾಹ ಉದ್ಘಾಟನೆಗೆ ಮುಖ್ಯಮಂತ್ರಿ ಸೇರಿದಂತೆ ಸಚಿವರ ದಂಡು ಆಗಮಿಸಲಿದ್ದು, ಸಪ್ತಾಹ ದಲ್ಲಿ ಸಹಕಾರಿ ಧುರೀಣರನ್ನು ಸನ್ಮಾನಿಸಲಾಗುತ್ತಿದೆ. ಪ್ರಮುಖವಾಗಿ ನಮ್ಮೆಲ್ಲರ ಒತ್ತಾಯ ಹಾಗೂ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಎಸ್. ಟಿ.‌ಸೋಮಶೇಖರ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಸೇಡಂದಲ್ಲಿ ಸಹಕಾರ ಸಪ್ತಾಹ ನಡೆಸಲು ಒಪ್ಪಿಗೆ ಹಾಗೂ ಮೆಚ್ಚುಗೆ ಸೂಚಿಸಿದ್ದಾರೆ. ಹೀಗಾಗಿ ಸರ್ವ ನಿಟ್ಟಿನಲ್ಲಿ ಯಾವುದಕ್ಕೂ ಕೊರತೆಯಾಗದಂತೆ ಸಿದ್ದತೆ ಮಾಡಿಕೊಳ್ಳಬೇಕೆಂದರು.

ಒಗ್ಗಟ್ಟಿನಲ್ಲಿ ಬಲವಿದೆ ಎಂಬುದೇ ಸಹಕಾರಿ ತತ್ವ ವಾಗಿದೆ.‌ ಆದ್ದರಿಂದ ಸಹಕಾರಿ ಕ್ಷೇತ್ರ ಬಲಪಡಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹತ್ತಾರು ಯೋಜನೆಯಳನ್ನು ಜಾರಿಗೆ ತಂದಿದ್ದಾರೆ.‌ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಪರಿಸ್ಥಿತಿ ಈಗ ಸುಧಾರಣೆಯಾಗಿದೆ. ಇದಕ್ಕೆಲ್ಲ ಸಹಕಾರಿ ತತ್ವ ಮತ್ತು ಪ್ರಮಾಣಿಕತೆಯೇ ಕಾರಣವಾಗಿದೆ ಎಂದು ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು.

ಸಹಕಾರಿ ಇಲಾಖೆಯ ಅಪರ ನಿಬಂಧಕರಾದ ಕೆ.ಎಂ ಆಶಾ ಅವರು ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಅಖಿಲ ಭಾರತ ಸಹಕಾರ ಸಪ್ತಾಹ ನಡೆಸಲಿಕ್ಕಾಗಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕದ ಸೇಡಂದಲ್ಲಿ ನಡೆಯುವ ಸಪ್ತಾಹ ಉದ್ಘಾಟನಾ ಸಮಾರಂಭ ಯಾವುದಕ್ಕೂ ಕೊರತೆಯಾಗದಂತೆ ನೆರವೇರಲು ಎಲ್ಲರೂ ತನು ಮನದಿಂದ ಕೈ ಜೋಡಿಸಬೇಕೆಂದರು.

ಸಭೆಯಲ್ಲಿ ಜಂಟಿ ನಿಬಂಧಕ ಎ.ಜೆ. ಕಾಂತರಾಜ, ಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಶರಣಬಸಪ್ಪ ಪಾಟೀಲ್ ಅಷ್ಠಗಿ, ಅಶೋಕ ಸಾವಳೇಶ್ವರ, ಕಲ್ಯಾಣರಾವ್ ಪಾಟೀಲ್ ಮಳಖೇಡ, ಚಂದ್ರಶೇಖರ ತಳ್ಳಳ್ಳಿ, ಬಳ್ಳಾರಿ ಡಿಸಿಸಿ ಬ್ಯಾಂಕ್ ಎಂಡಿ ಬಿ.ಸಿ. ಹರೀಶ್, ಬೀದರ್ ಡಿಸಿಸಿ ಬ್ಯಾಂಕ್ ಎಂಡಿ ಮಲ್ಲಿಕಾರ್ಜುನ ಮಹಾಜನ್, ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಎಂಡಿ ಶರಣಬಸಪ್ಪ ಬೆಣ್ಣೂರು, ಕಲಬುರಗಿ- ಯಾದಗಿರಿ ಸಹಕಾರಿ ಯೂನಿಯನ್ ಅಧ್ಯಕ್ಷ ದೀಪಾರೆಡ್ಡಿ, ಬಳ್ಳಾರಿ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಉಪನಿಬಂಧಕರು, ಸಹಾಯಕ ನಿಬಂಧಕರು ಸೇರಿದಂತೆ ಮುಂತಾದವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here