ಶಹಾಬಾದ: ಎ.ಐ.ಯು.ಟಿ.ಯು.ಸಿ ಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದಿಂದ ನಗರದಲ್ಲಿ ಕಟ್ಟಡ ಕಾರ್ಮಿಕರ ಸಮಾವೇಶ ಜರುಗಿತು.
ಎ.ಐ.ಯು.ಟಿ.ಯು.ಸಿ ನ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಶರ್ಮಾ ಮಾತನಾಡಿ, ಶಹಾಬಾದನಲ್ಲಿರುವ ಸಾವಿರಾರು ಕಟ್ಟಡ ಕಾರ್ಮಿಕರು ಸಂಘಟಿತರಾಗಿ ಸರಕಾರದಿಂದ ತಮ್ಮ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ಕಾರ್ಮಿಕ ಇಲಾಖೆಯಿಂದ ಹಲವಾರು ಸವಲತ್ತುಗಳನ್ನು ಪಡೆದುಕೊಳ್ಳುವಲ್ಲಿ ನೈಜ ಕಾರ್ಮಿಕರು ದೂರ ಉಳಿಯುತ್ತಿದ್ದಾರೆ. ರಾಜ್ಯ ಸರಕಾರ ಕಟ್ಟಡ ಕಾರ್ಮಿಕರ ನಿಧಿಯಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದು ಕಷ್ಟ ಪಟ್ಟು ದುಡಿಯುವ ಕಟ್ಟಡ ಕಾರ್ಮಿಕರಿಗೆ ಅನುಕೂಲಕರವಾಗಬೇಕಾಗಿದೆ. ಇಂದು ನಾವು ನೋಡುತ್ತಿರುವ ಹಲವಾರು ಸಮಸ್ಯೆಗಳನ್ನು ಸಂಘಟಿತರಾಗಿ ಹೋರಾಡಬೇಕಾಗಿದೆ ಎಂದು ನುಡಿದರು.
ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎ.ಐ.ಯು.ಟಿ.ಯು.ಸಿ ಸಂಚಾಲಕರಾದ ರಾಘವೇಂದ್ರ ಎಂ.ಜಿ. ಮಾತನಾಡಿ, ತಾಲೂಕಿನ ಹಳ್ಳಿಗಳಿಂದ ಸಾವಿರಾರು ಕಟ್ಟಡ ಕಾರ್ಮಿಕರು ದಿನಾಲೂ ಕಲಬುರಗಿಗೆ ಹೋಗಿ ದುಡಿದು ಬರುತ್ತಿದ್ದಾರೆ, ಅದರಲ್ಲಿ ಬಹುಸಂಖ್ಯಾತರು ಮಹಿಳೆಯರು ಕಷ್ಟ ಪಟ್ಟು ದುಡಿಯುತ್ತಿದ್ದಾರೆ. ಸರಕಾರದ ಸೌಲಭ್ಯಗಳು ಅವರಿಗೆ ಸಿಗುವಂತೆ ಸಂಘಟನೆಯು ಕಾರ್ಯ ರೂಪಿಸಬೇಕೆಂದರು.
ಕಟ್ಟಡ ಕಾರ್ಮಿಕ ಸಂಘದ ಸಂಚಾಲಕರಾದ ತಿಮ್ಮಯ್ಯ ಬಿ. ಮಾನೆ ರವರು ನಡೆಸಿಕೊಟ್ಟರು. ನಂತರ ಕಟ್ಟಡ ಕಾರ್ಮಿರ ಶಹಾಬಾದ ಸಮಿತಿಯನ್ನು ರಚಿಸಲಾಯಿತುಸದಸ್ಯರಾಗಿ, ಲಕ್ಷ್ಮಣ ದೇವಕರ, ಸುರೇಶ, ಹಣಮಂತ ಡಿ., ನಾಗರಾಜ, ರಾಮು, ಲಕ್ಷ್ಮಣ ದೇವದುರ್ಗಕರ್, ಕಾಳಿಂಗ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…