ಕಲಬುರಗಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಕಾವಲು ಪಡೆ) ವತಿಯಿಂದ ಪುನೀತ ಗೀತ ಗಾಯನ ವಿವಿಧ ಕ್ಷೇತ್ರದ ಸಾಧಕರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಕನ್ನಡ ಭವನ ಸುವರ್ಣ ಸಭಾ ಭವನದಲ್ಲಿ ಭಾನುವಾರ ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥ ನಾಲ್ವಾರಕರ್ ತಿಳಿಸಿದರು.
ಮಳಖೇಡ ದರ್ಗಾದ ಹಜರತ್ ಸೈಯದ್ ಮುಸ್ತಫಾ ಖಾದ್ರಿ ಸಾನ್ನಿಧ್ಯ ವಹಿಸುವರು. ಶಾಸಕ ದತ್ತಾತ್ರೇಯ ಪಾಟೀಲ ಉದ್ಘಾಟಿಸುವರು. ಶಾಸಕರಾದ ಬಸವರಾಜ ಮತ್ತಿಮಡು, ಖನೀಜ್ ಫಾತಿಮಾ ಆಗಮಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖಂಡರಾದ ಶಿವಕಾಂತ ಮಹಾಜನ, ನಿತೀನ್ ಗುತ್ತೇದಾರ, ವೇದಿಕೆ ರಾಜ್ಯಾಧ್ಯಕ್ಷ ಎಸ್. ಸುರೇಶ, ಜೂ. ಪುನೀತ ಚಂದ್ರ ಮೌರ್ಯ, ಅಲ್ಲಮಪ್ರಭು ಪಾಟೀಲ, ಶರಣು ಮೋದಿ, ಕೃಷ್ಣಾರೆಡ್ಡಿ, ನೀಲಕಂಠ ಮೂಲಗೆ, ಸಂತೋಷ ಬಿಲಗುಂದಿ, ಡಾ. ವಿಕ್ರಮ ಸಿದ್ಧಾರೆಡ್ಡಿ, ಲಿಂಗರಾಜ ತಾರ್ ಫೈಲ್, ಗೀತಾ ರಾಜು ವಾಡೆಕರ್, ಸುರೇಶ ಬಡಿಗೇರ, ಸಚಿನ್ ಫರಹತಾಬಾದ ಇತರರು ಮುಖ್ಯ ಅತಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ವಿವಿಧ ಕ್ಷೇತ್ರದ ಸಾಧಕರಾದ ವೀರಭದ್ರ ಸಿಂಪಿ, ಮಹಾದೇವ ಧನ್ನಿ, ಸುಬ್ಬಯ್ಯ ನೀಲಾ, ಎಂ.ಎಸ್. ಪಾಟೀಲ ನರಿಬೋಳ, ಜೈಭೀಮ, ರವಿ ಸ್ವಾಮಿ, ಸುನಿಲ ಕಾಂಬ್ಳೆ, ರಮೇಶ ಮೇಳಕುಂದಾ, ಈಶ್ವರ ಕಟ್ಟಿಮನಿ, ಡಾ. ಫಾರುಕ್ ಮನೂರ, ಜಾಕಿರ್ ಹುಸೇನ್ ಉಸ್ತಾದ ಇತರರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.
ರವಿ ಎಸ್. ವಾರಿ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…