ಸುರಪುರ : ನ್ಯಾಯಾಲಯಗಳಲ್ಲಿನ ಕೆಲವು ಪ್ರಕರಣಗಳು ಇದೇ ತಿಂಗಳು 12 ರಂದು ನ್ಯಾಯಾಲಯದಲ್ಲಿ ನಡೆಯಲಿರುವ ರಾಷ್ಟ್ರೀಯ ಬೃಹತ್ ಲೋಕ್ ಅದಲತ್ತನಲ್ಲಿ ಪ್ರಕರಣಗಳು ಇತ್ಯರ್ಥ ಪಡಿಸಿಕೊಳ್ಳಬಹುದೆಂದು ನ್ಯಾಯವಾದಿಗಳಾದ ಚೆನ್ನಪ್ಪ ಹೂಗಾರ ಹೇಳಿದರು.
ತಾಲೂಕಿನ ಕಚಕನೂರ ಬೈಚಬಾಳ ಗ್ರಾಮ ಪಂಚಾಯತ ಕಾರ್ಯಾಲಯಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಸುರಪುರ ನ್ಯಾಯವಾದಿಗಳ ಸಂಘ ಸುರಪುರ ಮತ್ತು ಸರ್ಕಾರಿ ವಿವಿಧ ಇಲಾಖೆಗಳ ಸಯೋಗದಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ನಾಗರಿಕ ಸಬಲೀಕರಣ ಕಾರ್ಯಕ್ರಮವನ್ನು ಉದ್ದೇಶಿಸಿ ಉಪನ್ಯಾಸಕರಾಗಿ ಮಾತನಾಡಿ, ಇಂದು ಎಲ್ಲರಿಗೂ ಕಾನೂನಿನ ಕುರಿತು ಮಾಹಿತಿ ನೀಡಲೆಂದು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಸಲಾಗುತ್ತಿದ್ದು,ತಾವೆಲ್ಲರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜನ ಸಾಮಾನ್ಯರು ತಿಳಿಯ ಬೇಕಾದ ಕಾನೂನುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೌಡಪ್ಪಗೌಡ ಚಿಕ್ಕನಳ್ಳಿ ನ್ಯಾಯವಾದಿಗಳಾದ ಸಚಿನ್ , ಮಲ್ಲು ತಳ್ಳಳ್ಳಿ ಮಾತನಾಡಿದರು.ಮುಖಂಡರಾದ ಭೀಮಣ್ಣ ದೊರೆ ದಶರಥ ದೊರಿ ಗ್ರಾಮ ಪಂಚಾಯತ ಕಾರ್ಯದರ್ಶಿ ಯಂಕನಗೌಡ ವೇದಿಕೆ ಮೇಲಿದ್ದರು. ಗ್ರಾಮ ಪಂಚಾಯತ್ ಕರ ವಸೂಲಿಗಾರರಾದ ಯಲ್ಲಪ್ಪ ಅರಕೇರಿ ಸ್ವಾಗತಿಸಿದರು. ಹಣಮಂತ್ರಾಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…