ಕಲಬುರಗಿ: ಭಾರತದ ಬೇರೆ ಯಾವೊಂದು ಭಾಷೆಗೂ ಇಲ್ಲದಂತ ಪರಂಪರೆ ಕನ್ನಡ ಭಾಷೆಗಿದೆ. ಅದಕ್ಕಾಗಿಯಾದರೂ ಕನ್ನಡ ಭಾಷೆಗೆ ಎಂತಹ ಶಕ್ತಿಯಿದೆ ಎನ್ನುವುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹೆಚ್. ಶಿವರಾಮೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಕುಸನೂರು ರಸ್ತೆಯ ಕೃಷ್ಣಾ ನಗರದಲ್ಲಿ ಹೆಚ್. ಶಿವರಾಮೇಗೌಡರ ಕರವೇ ಜಿಲ್ಲಾಧ್ಯಕ್ಷ ಶರಣು ಹೊಸಮನಿ ಆಯೋಜಿಸಿದ್ದ 67 ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಡೆದ ಕಲಬುರಗಿ ಕನ್ನಡಿಗರ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾಷೆ ವಿಚಾರದಲ್ಲಿ ನಮ್ಮ ನಾಡು ತಲ್ಲಣದ ಸ್ಥಿತಿಯಲ್ಲಿದೆ. ಇದು ಕೇವಲ ಕನ್ನಡಕ್ಕಷ್ಟೆ ಅಲ್ಲ. ಭಾರತದ ಎಲ್ಲಾ ಭಾಷೆಗಳು ಈ ಸಮಸ್ಯೆಯನ್ನು ಎದುರಿಸುತ್ತಿವೆ. ಕನ್ನಡ ಭಾಷೆಯ ಶಕ್ತಿ, ಸೌಂದರ್ಯ, ಘನತೆಯನ್ನು ಮರೆಯುತ್ತಿದ್ದೇವೆ. ಸರ್ಕಾರಿ ಶಾಲೆಗಳಲ್ಲಿ ಓದಿದವರು ವಿಜ್ಞಾನಿಗಳು, ದೊಡ್ಡ ದೊಡ್ಡ ಅಧಿಕಾರಿಗಳು, ಜ್ಞಾನಪೀಠ ಪ್ರಶಸ್ತಿ ಪುರುಸ್ಕøತರಾಗಿದ್ದಾರೆ. ಇದ್ಯಾವುದನ್ನು ಗೌರವಿಸದೆ ಇಂದಿನ ಬಹುಪಾಲು ಪೆÇೀಷಕರುಗಳು ತಮ್ಮ ಮಕ್ಕಳು ಖಾಸಗಿ ಶಾಲೆಗೆ ಸೇರಿ ಇಂಗ್ಲಿಷ್ ಮಾತನಾಡಬೇಕೆಂಬ ವ್ಯಾಮೋಹದಲ್ಲಿರುವುದು ನಿಜಕ್ಕೂ ಕನ್ನಡಕ್ಕೆ ಅಗೌರವ ತೋರಿದಂತಾಗುತ್ತದೆ ಎಂದು ವಿಷಾಧಿಸಿದರು.
ಕನ್ನಡಿಗರಿಗೆ ಅನ್ಯ ಭಾಷೆಗಳ ಬಗ್ಗೆ ವಿಚಿತ್ರವಾದ ಮನೋಭಾವನೆಯಿರುವುದರಿಂದ ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯುತ್ತಿಲ್ಲ. ಭಾಷೆ ಎಂದರೆ ಸಂಸ್ಕೃತಿ, ಪರಂಪರೆ, ಭಾಷೆ ಎನ್ನುವುದು ಒಂದು ವಾಹನವಿದ್ದಂತೆ. ಹಳೆಗನ್ನಡ ಸಂಪೂರ್ಣವಾಗಿ ಮರೆತು ಹೋಗಿದೆ. ಯಾವ ವಿಶ್ವವಿದ್ಯಾನಿಲಯಗಳು ಕನ್ನಡ ಭಾಷೆ ಉಳಿವಿನ ಕಡೆ ಗಮನಹರಿಸುತ್ತಿಲ್ಲ. ಪರಂಪರೆ ಎಂದರೆ ಏನು? ಅದರಿಂದ ಏನು ಪಡೆದುಕೊಂಡಿದ್ದೇವೆ. ಯಾವುದನ್ನು ಕಳೆದುಕೊಂಡಿದ್ದೇವೆ ಎನ್ನುವುದನ್ನು ಚಿಂತಿಸಬೇಕಿದೆ ಎಂದರು.
ಒಂದು ಧರ್ಮ ಮತ್ತೊಂದು ಧರ್ಮವನ್ನು ಗೌರವಿಸುವುದೇ ಸಂಸ್ಕೃತಿ. ಕೋಮುವಾದ, ಜಾತಿ, ಧರ್ಮ ಘರ್ಷಣೆಯಲ್ಲಿ ದೇಶ ಮುಳುಗಿದೆ. ಹನ್ನೆರಡನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಸಮಾನತೆ ಇನ್ನು ಕನಸಾಗಿಯೇ ಉಳಿದಿದೆ. ವಚನ ಚಳುವಳಿ, ಶರಣರ ಹೋರಾಟದಲ್ಲಿ ಇತಿಹಾಸವಿದೆ. ಪಂಚೇದ್ರಿಯಗಳ ಮೇಲೆ ಯಾರು ವಿಜಯ ಸಾಧಿಸುತ್ತಾರೋ ಅವರು ನಿಜವಾದ ಸ್ವತಂತ್ರರು ಎಂದರು.
ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗಟ್ಟಿಮೇಳ ಧಾರಾವಾಹಿ ನಟಿ ಆದಿತಿ (ಪ್ರೀಯಾ) ಚಾಲನೆ ನೀಡಿದರು. ಪಾಳಾದ ಗುರುಮೂರ್ತಿ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಚಿನ್ ಫರತಾಬಾದ, ಶಿವಮೊಗ್ಗ ಬಂದೀಖಾನೆ ಆರಕ್ಷಕ ಶಿವಾನಂದ ವಾಕ್ಸೆ, ಮಲ್ಲಿಕಾರ್ಜುನ ಕಿಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ವಿವಿಧ ಕ್ಷೇತ್ರದ ಸಾಧಕರಾದ ಲಕ್ಷ್ಮಣ ಗರೂರು, ಮಂಜುನಾಥ ಜಮಾದಾರ, ಹಣಮಂತ ಹೊಸಮನಿ, ಗೋಪಾಲ ನಾಟೀಕಾರ, ಯುವರಾಜ ಕಟ್ಟಿಮನಿ, ಶರಣಬಸಪ್ಪ ಸುಗೂರು ಅವರನ್ನು ಸನ್ಮಾನಿಸಲಾಯಿತು.
ಯುವ ಘಟಕ ಅಧ್ಯಕ್ಷ ಆನಂದ ತೆಗನೂರು, ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ, ಭಾಗ್ಯಶ್ರೀ, ನಗರಾಧ್ಯಕ್ಷ ಶ್ರೀನಿವಾಸ ಕಡ್ಲಾ, ನಾಗೇಶ ಎಸ್., ಪವನ್, ದೀಪಕ್, ಸಚಿನ್, ವಿನೋದ, ಸಿದ್ರಾಮ ಭಾಗೋಡಿ, ಶಿವಕುಮಾರ ಗರೂರು, ಸುಭಾಷ್, ಪ್ರಭು, ವಿಠ್ಠಲ್ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…