ಸಮುದಾಯದ ಅಭಿವೃದ್ಧಿಗೆ ಸದಾ ಜತೆಗಿರುವೆ: ದತ್ತಾತ್ರೇಯ ಪಾಟೀಲ್ ರೇವೂರ್

ಕಲಬುರಗಿ: ಶಾಲಾ ಕಟ್ಟಡ ನಿರ್ಮಿಸಿದ್ದು ಸಂತಸ ತಂದಿದೆ ಎಂದು ಕೆ.ಕೆ.ಅರ್.ಡಿ.ಬಿ. ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್ ಅಭಿಪ್ರಾಯಪಟ್ಟರು.

ಭಾನುವಾರ ಇಲ್ಲಿನ ಬಿದ್ದಾಪೂರ ಕಾಲೋನಿಯ ರಾಮಗೋಪಾಲ ಮಾಲು ಲೇಔಟ್ ನಲ್ಲಿ ಸರ್ಕಾರದ 50 ಲಕ್ಷ‌ ರೂ. ನೆರವಿನ ಜೊತೆಗೆ ಕಲ್ಯಾಣ ಕರ್ನಾಟಕ ಕಲ್ಯಾಣ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ) ವತಿಯಿಂದ ನಿರ್ಮಿಸಲಾಗಿರುವ ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಟ್ರಸ್ಟ್ ಅಡಿಯಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ 2.14 ಕೋಟಿ ರೂ. ಮಂಜೂರಾತಿ ನೀಡಿ ಮೊದಲ ಹಂತದಲ್ಲಿ 50 ಲಕ್ಷ ರೂ. ಬಿಡುಗಡೆಯಾಗಿದೆ. ಟ್ರಸ್ಟ್ ಈ ಅನುದಾನ ಸದ್ಬಳಕೆ ಮಾಡಿಕೊಂಡು ಉತ್ತಮವಾದ ಕಟ್ಟಡ ನಿರ್ಮಿಸಿದೆ. ಇನ್ನುಳಿದ ಅನುದಾನ ಬಿಡುಗಡೆಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇದಲ್ಲದೇ ನಗರದ ರಾಮ ಮಂದಿರ ಬಳಿ ಸರ್ಕಾರದ ಅನುದಾನದಿಂದ ನಿರ್ಮಾಣಗೊಂಡಿರುವ ಶ್ರೀ ಶಿವಶರಣ ಹರಳಯ್ಯ ಸಮಾಜದ ಸಮುದಾಯ ಭವನದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಕರೆ ತರುವ ಪ್ರಯತ್ನ ಮಾಡಲಾಗುವುದು. ಪರಿಶಿಷ್ಟ ಜಾತಿಯಲ್ಲಿ ಹಿಂದುಳಿದ ಸಮಗಾರ ಸಮುದಾಯದ ಜತೆ ನಾನು ಒಬ್ಬನ್ನಾಗಿ ನಿಲ್ಲುವೆ ಎಂದು ದತ್ತಾತ್ರೇಯ ಪಾಟೀಲ ರೇವೂರ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿವೃತ್ತ ಹೆಚ್ಚುವರಿ ಎಸ್.ಪಿ. ಬೆಳ್ಳಪ್ಪ ಎಸ್. ಮರತೂರಕರ್ ಮಾತನಾಡಿ, ಸಮುದಾಯದ ವತಿಯಿಂದ ಒಂದು ಶಾಲೆ ನಿರ್ಮಾಣ ಮಾಡಬೇಕು ಎಂಬ ಮಹಾದಾಸೆಯಿಂದ ಇಂದು ನಗರದಲ್ಲಿ ಕಲ್ಯಾಣ ಕರ್ನಾಟಕ ಕಲ್ಯಾಣ ಮತ್ತು ಅಭಿವೃದ್ಧಿ ಟ್ರಸ್ಟ್ ಅಡಿಯಲ್ಲಿ ಅದ್ಭುತ ಶಾಲಾ ಕಟ್ಟಡ ನಿರ್ಮಾಣವಾಗಿದೆ. ಇದಕ್ಕೆ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳ ಸತತ ಪ್ರಯತ್ನವೇ ಇದಕ್ಕೆ ಕಾರಣ ಎಂದ ಅವರು ಶಾಲಾ‌ ಕಟ್ಟಡದ‌ ಮುಂದಿನ ಹಂತದ‌ ನಿರ್ಮಾಣಕ್ಕೆ ಸರ್ಕಾರದಿಂದ‌ ಬರಬೇಕಿರುವ ಬಾಕಿ ಅನುದಾನಕ್ಕೆ ಟ್ರಸ್ಟ್ ನ ಪದಾಧಿಕಾರಿಗಳು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕು ಎಂದರು.

ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧೀಕ್ಷಕ ಅಭಿಯಂತ ಶಿವಶಂಕರ ಗುರಗುಂಟಿ ಮಾತನಾಡಿದರು. ರಾಮಚಂದ್ರ ಗೋಳಾ ಅವರು ಟ್ರಸ್ಟ್ ನ ಮುಂದಿನ ಕಾರ್ಯಚಟುವಟಿಕೆ ಹಾಗೂ ಯೋಜನೆಗಳ ವರದಿ ಮಂಡಿಸಿ, ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿದರು.

*ಕಂಪೌಂಡ್ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನಕ್ಕೆ ಮನವಿ:*

ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಉಮಾಕಾಂತ ಕೂಡಿ ಅವರು ಮಾತನಾಡಿ, ಶಾಲೆಯ ಕಂಪೌಂಡ್, ಪೀಠೋಪಕರಣ ಹಾಗೂ ಆಟೋಪಕರಗಳ ಖರೀದಿಗೆ ವಿಶೇಷ ಅನುದಾನದಲ್ಲಿ ಟ್ರಸ್ಟ್ ಗೆ 25 ಲಕ್ಷ ರೂ. ಅನುದಾನ ನೀಡಬೇಕು ಎಂದು ಕ್ಷೇತ್ರದ ಶಾಸಕರಾಗಿರುವ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ. ಮುಖಂಡ ಅರವಿಂದ ನವಲಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ. ಅಂಬಾರಾಯ ರುದ್ರವಾಡಿ, ವಾಣಿಜ್ಯ ಇಲಾಖೆಯ ನಿವೃತ್ತ ಅಧಿಕಾರಿ ಮಹಾಂತಪ್ಪ ಗೋಳಾ, ಶಿವಶರಣಪ್ಪ ಹೀರಾಪುರ, ಚಂದ್ರಕಾಂತ‌ ದೇಗಲಮಡಿ, ನಿಂಗಪ್ಪ ಕಣ್ಣೂರ, ಸಾಯಬಣ್ಣಾ ಸೇಡಂಕರ್, ಅರುಣಕುಮಾರ ಕೋಬಾಳ,ಗೋಪಾಲ ತೆಗನೂರ್, ಬಸವರಾಜ ಶೆಳ್ಳಗಿ, ಶರಣಪ್ಪ ಗೊಬ್ಬೂರಕರ್ ಸೇರಿದಂತೆ ಟ್ರಸ್ಟ್ ಇನ್ನಿತರ ಪದಾಧಿಕಾರಿಗಳು ಇದ್ದರು.

ಜಟ್ಟಿಂಗರಾಯ್ ಶಾಖಾಪೂರೆ ಸ್ವಾಗತಿಸಿದರು, ಮಹಾದೇವ ಮುದ್ದಡಗಿ ನಿರೂಪಿಸಿದರು. ಜಗದೀಶ್ ಶಿವಕುಮಾರ್ ಜಾಲಹಳ್ಳಿ ಅವರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420