ಪ್ರಜಾಕೀಯ

ಸಂವಿಧಾನದಿಂದಾಗಿಯೇ ನಾನು ನಿಮ್ಮ ಮುಂದೆ ನಿಂತು ಮಾತನಾಡುತ್ತಿರುವುದು: ಖರ್ಗೆ

ಕಲಬುರಗಿ: ಸಂವಿಧಾನ ಇರುವುದರಿಂದಲೇ ನಾನು ಇಂದು ನಿಮ್ಮೆದರು ನಿಂತು ಮಾತನಾಡುತ್ತಿದ್ದೇನೆ ಎಂದು ಕಲಬುರಗಿ ಲೋಕಸಭಾ  ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಾದಿಸಿದರು.

ಅವರು ಇಂದು ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಏರ್ಪಡಿಸಲಾಗಿದ್ದ  ಪರಿಶಿಷ್ಟ ಜಾತಿ ( ಎಡಗೈ) ಸಮುದಾಯದ ಸಭೆಯಲ್ಲಿ ಅವರು ಮಾತನಾಡಿ, ಸಂವಿಧಾನದ ರಕ್ಷಣೆಗೆ ನಾನು ಬದ್ಧನಾಗಿದ್ದೇನೆ ಅದು ನನ್ನ ಕರ್ತವ್ಯವೂ ಕೂಡ. ಕೆಲ ದಿನಗಳ ಹಿಂದೆ ಕೆಲವರು ದೇಶಬಿಟ್ಟು ಹೋಗುವ ಮಾತನಾಡಿದ್ದರು. ಆದರೆ, ಅಂಬೇಡ್ಕರ್ ಅವರಿಗೆ ಅನ್ಯಾಯವಾದಾಗ ಯಾರೂ ಹಾಗೆ ಹೇಳಿರಲಿಲ್ಲ. ಬಿಜೆಪಿಯವರು ಶೋಷಿತರನ್ನು ನುಂಗಿ‌ ಜೀವಿಸುವ ಹುನ್ನಾರ ಹೊಂದಿದ್ದಾರೆ. ಸಮಾನ ಹಕ್ಕುಗಳನ್ನು ದೇಶದ ನಾಗರಿಕರಿಗೆ ಒದಗಿಸಿರುವ ಸಂವಿಧಾನವನ್ನೇ ಬದಲಿಸುವ ಮಾತನಾಡುತ್ತಾರೆ. ಬಿಜೆಪಿ ಅಂತ ನಾಯಕರನ್ನು ಮೋದಿ ಖಂಡಿಸಲಿಲ್ಲ ಅಥವಾ ಅವರ ಪರವಾಗಿ ಕ್ಷಮೆಯೂ ಕೇಳಲಿಲ್ಲ ಎಂದರು‌.

” ಸಮುದಾಯದ ಎರಡೂ ವರ್ಗದವರು ಕುಳಿತುಕೊಂಡು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು.  ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಹೋಗುವುದಾದರೆ ಇಬ್ಬರೂ ಒಗ್ಗಟ್ಟಾಗಿ ಹೋಗೋಣ ” ಎಂದು ಅಭಯ ನೀಡಿದರು. ಮಾಜಿ ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ ಅವರು ಮಾತನಾಡಿ ಖರ್ಗೆ ಸಾಹೇಬರು 11 ಸಲ ಗೆದ್ದಿದ್ದಾರೆ ಇನ್ನೊಂದು ಸಲ ಗೆಲ್ಲುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ. “ಖರ್ಗೆ ಅವರ ಸಲುವಾಗಿ ರಕ್ತ ಕೊಟ್ಟಾದರೂ ಅವರನ್ನು ಗೆಲ್ಲಿಸುತ್ತೇವೆ” ಎಂದು ಘೋಷಿಸಿದರು.

ಮಾಜಿ‌ ಸಚಿವ ಡಾ ಶರಣಪ್ರಕಾಶ ಪಾಟೀಲ್ ಮಾತನಾಡಿ ಖರ್ಗೆ ಸಾಹೇಬರ ಪರಿಶ್ರಮದಿಂದಾಗಿ ಆರ್ಟಿಕಲ್ 371 ( ಜೆ) ಜಾರಿಗೆ ಬಂದು ಈ ಭಾಗಕ್ಕೆ ಅನುಕೂಲವಾಗಿದೆ ಈಗಾಗಲೇ 32000 ಜನರು ಉದ್ಯೋಗಪಡೆದುಕೊಂಡಿದ್ದಾರೆ ಅದರಲ್ಲಿ ಎಲ್ಲ ಸಮುದಾಯದ ಅಭ್ಯರ್ಥಿ ಗಳಿದ್ದಾರೆ. ಹಾಗಾಗಿ, ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಮತ್ತೊಮ್ಮೆ ಗೆಲ್ಲಿಸಬೇಕೆಂದು ಕರೆ ನೀಡಿದರು.

ವೇದಿಕೆಯ ಮೇಲೆ ಅಲ್ಲಮಪ್ರಭು ಪಾಟೀಲ್, ಫ್ರೊ ಹನುಮಂತಯ್ಯ, ಚಂದ್ರಿಕಾ ಪರಮೇಶ್ವರಿ, ಶ್ಯಾಮ್ ನಾಟೀಕಾರ್ ಸೇರಿದಂತೆ ಹಲವರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420