ಸಮಸ್ಯೆಗಳಿಗೆ ಆತ್ಮಹತ್ಯೆಯೆ ಪರಿಹಾರವಲ್ಲ

0
176

ಆನೇಕಲ್: ತಾಲೂಕಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯ ಕ್ರಮವನ್ನು ಕೌಶಲ್ಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ಘಾಟಣೆ ಮಾಡಿ ಮಾತನಾಡಿದ ಅವರು ಹೆಣ್ಷುಮಕ್ಕಳು ಸಮಾಜದಲ್ಲಿ ತುಂಬಾ ಹಿಂದೆ ಉಳಿದ್ದಾರೆ. ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಮುಂದೆಬರಬೇಕು,ಮಹಿಳೆಯರಿಗೆ ಆಗುತ್ತಿರುವಂತಹ ದೌರ್ಜನ್ಯವನ್ನು ವಿರೋಧಿಸಿ ಧ್ವನಿ ಎತ್ತಬೇಕು ಮತ್ತು ಕಾನೂನಿನ ಬಗ್ಗೆ ಮಾಹಿತಿಗಳನ್ನು ತಿಳಿಸಿದರಬೇಕು ಎಂದು ಹೇಳಿದರು.

Contact Your\'s Advertisement; 9902492681

ಟೆಲಿ ಲಾ ಕರ್ನಾಟಕ ವಕೀಲರಾದ ಪುರುಷೋತ್ತಮ ಎ ಮಾತನಾಡಿ ನ್ಯಾಯಾಧೀಶರು ಜನರ ಬಳಬರಬೇಕು, ಸಾಮಾನ್ಯ ಜನರಿಗೂ ಕಾನೂನು ತಲುಪಬೇಕು, ನಂಬರ್ ತಿಂಗಳ 9 ನೇ ತಾರೀಖು ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಣೆ ಮಾಡಿ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಉಚಿತವಾಗಿ ಸಿಗಬೇಕು ಎಂಬುದೇ 1987 ರ ಕಾನೂನು ಸೇವೆಗಳ ಕಾಯ್ದೆಯ ಉದ್ದೇಶ ಎಂದರು.

ಆರ್.ಚಂದ್ರಶೇಖರ ಸಹಾಯಕ ಸರ್ಕಾರಿ ಅಭಿಯೋಜಕರು ಮಾತನಾಡಿ, ಹೊಲಿಗೆ ಯಂತ್ರದಿಂದ ಒಂದು ಕುಟುಂಬವನ್ನು ಸಾಕಬಹುದು, ನಮ್ಮ ತಂದೆ ಕೂಡ ಹೊಲಿಗೆ ಯಂತ್ರದಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ, ಕಾನೂನು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ ಎಲ್ಲರೂ ಕಾನೂನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಆರ್.ರಮೇಶ ಅಧ್ಯಕ್ಷರು ವಕೀಲರ ಸಂಘ, ಇವರು ಮಾತನಾಡಿ ಮನುಷ್ಯ ‌ಹುಟ್ಟಿದಾಗಿನಿಂದ ಕಾನೂನು ನಿಮ್ಮನ್ನು ಹಿಂಬಾಲಿಸುತ್ತದೆ ಹಾಗೆಯೇ ಸತ್ತಮೇಲೂ ಕೂಡ ಕಾನೂನು ಬೇಕಾಗುತ್ತದೆ ಎಂದರು, ಕಾರ್ಯಕ್ರಮದಲ್ಲಿ ವಕೀಲರ ಸಂಘ ಕಾರ್ಯದರ್ಶಿ ವೈ ಮಂಜುನಾಥ, ಕಖಜಾಂಚಿ ಕೆ ವಿ ರವಿ, ವಕೀಲರಾದ ಶಿವರಾಜು, ಭಾಗ್ಯ, ನಾಗರತ್ನ, ನಿರ್ಮಲ, ಕೌಶಲ್ಯ ತರಬೇತಿ ಕೇಂದ್ರದ ರಾಜು, ಸೌಮ್ಯ, ಮಂಜುಳಾ, ಮುರಳಿ, ಜಯಶ್ರೀ ಮತ್ತು ಕಂಪ್ಯೂಟರ್ ತರಬೇತಿ ವಿದ್ಯಾರ್ಥಿಗಳು, ಮತ್ತು ಹೊಲಿಗೆ ತರಬೇತಿ ಶಿಬಿರದ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here