ಬಿಸಿ ಬಿಸಿ ಸುದ್ದಿ

ಧರ್ಮಾಪೂರದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದ ಜಿಲ್ಲಾ ಚುನಾವಣಾಧಿಕಾರಿ

ಕಲಬುರಗಿ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಅಂಗವಾಗಿ 01-01-2023 ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಬುಧವಾರ ಕರಡು ಮತದಾರರ ಪಟ್ಟಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಗುಲಬರ್ಗಾ ಗ್ರಾಮೀಣ ವಿಧಾನಸಬಾ ಕ್ಷೇತ್ರದ ಧರ್ಮಾಪೂರ ಮತಗಟ್ಟೆ ಸಂಖ್ಯೆ 226ರಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಮತಗಟ್ಟೆಯಲ್ಲಿ 854 ಜನರು ಮತ ಚಲಾಯಿಸಲು ಅರ್ಹರಿದ್ದು, ಅವರ ಪಟ್ಟಿ ಇಂದಿಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಗೆ ಏನಾದರು ಆಕ್ಷೇಪಣೆಗಳಿದಲ್ಲಿ ಡಿಸೆಂಬರ್ 8ರ ವರೆಗೆ ಇಲ್ಲಿನ ಬಿ.ಎಲ್.ಓ. ಗಳಿಗೆ ಸಲ್ಲಿಸಬೇಕು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಡಿಸೆಂಬರ್ 26 ರೊಳಗೆ ವಿಲೇವಾರಿ ಮಾಡಲಾಗುತ್ತದೆ ಎಂದು ನೆರೆದ ಸಾರ್ವಜನಿಕರಿಗೆ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ನಮೂನೆ 6ರಲ್ಲಿ, ಯಾರಾದರು ನಿಧನ ಹೊಂದಿದಲ್ಲಿ ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಮೂನೆ 7 ಹಾಗೂ ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ವರ್ಗಾವಣೆಗೆ ನಮೂನೆ 8ರಲ್ಲಿ ಅರ್ಜಿ ಸಲ್ಲಿಸಬೇಕು. ವಿಶೇಷವಾಗಿ ಯುವ ಮತದಾರರು 18 ವರ್ಷ ತುಂಬಿಲ್ಲದಿದ್ದರು, ಅರ್ಜಿ ಸಲ್ಲಿಸಿದಲ್ಲಿ 18 ವರ್ಷ ನಂತರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಲಬುರಗಿ ತಹಶೀಲ್ದಾರ ಪ್ರಕಾಶ ಕುದರಿ, ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಶೀಲ್ದಾರ ಮಹಾಂತೇಶ ಮುಡಬಿ ಸೇರಿದಂತೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಇದ್ದರು

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago