ಬಿಸಿ ಬಿಸಿ ಸುದ್ದಿ

ಮತದಾರರ ಪಟ್ಟಿ ಪ್ರಕಟ 18ವರ್ಷಕ್ಕೆ 3ತಿಂಗಳ ಕಡಿಮೆ ಇದ್ದರು ಹೆಸರು ಸೇರ್ಪಡೆಗೆ ಅವಕಾಶ

ಕಲಬುರಗಿ: ಹದಿನೆಂಟು ವರ್ಷ ತುಂಬಲು ಕೇವಲ ಮೂರು ತಿಂಗಳು ಕಡಿಮೆ ಇದ್ದರೆ ಅವರು ಕೂಡ ಮತದಾನ ಮಾಡಲು ಅರ್ಹರಿರುತ್ತಾರೆ. ಅರ್ಹ ಯುವಕರು ಬೇಗನೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023 ಕರಡು ಪಟ್ಟಿ ಪ್ರಕಟ ಹಿನ್ನೆಲೆಯಲ್ಲಿ ಚುನಾವಣಾ ಜಾಗೃತಿ ಮೂಡಿಸಲು ವಾಕಥಾನ್ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಧಾನ ಸಭಾ ಮತಕ್ಷೇತ್ರದಲ್ಲಿ ಚುನಾವಣೆ ಅಯೋಗದ ನಿರ್ದೇಶನದಂತೆ ಇಂದು ಎಲ್ಲಾ ಮತದಾರರ ಪಟ್ಟಿ ಪ್ರಚುರಪಡಿಸಲಾಗಿದೆ ಜಿಲ್ಲೆಯಲ್ಲಿ 18-20 ವರ್ಷದ ಮಕ್ಕಳು ನೋಂದಣೆ ಮಾಡುವುದನ್ನು ಕಡಿಮೆಯಾಗಿದೆ ಎಲ್ಲರೂ ನೋಂದಣಿ ಮಾಡಬೇಕೆಂದು ತಿಳಿಸಿದರು.

ವೋಟರ್ ಹೆಲ್ಪೆಲೈನ್ ಆ್ಯಪ್ ಅಥವಾ ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದರು.

ಸಾರ್ವಜನಿಕರು ಹಾಗೂ ಮತದಾರರು ಪಟ್ಟಿ ಪರೀಕ್ಷಿಸಿ ಆಕ್ಷೇಪಣೆಗಳಿದ್ದರೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ತಿದ್ದುಪಡಿ ಮಾಡಲು ಹೆಸರು ತೆಗೆದು ಹಾಕಲು ವರ್ಗಾವಣೆ ಮಾಡಲು ಸಂಬಂಧಿತ ಮತಗಟ್ಟೆ ಅಧಿಕಾರಿ (ಬಿ.ಎಲ್.ಒ) ಹತ್ತಿರ ಅವಶ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿಯಂತೆ 2022 ನವೆಂಬರ್ 9 ರಿಂದ 2023 ಜನವರಿ 5 ರ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ಜಾಥದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿ. ಬದೋಲೆ, ಮಹಾನಗರ ಪಾಲಿಯ ಆಯುಕ್ತರಾದ ಪಾಟೀಲ ಭುವನೇಶ ದೇವಿದಾಸ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಮಹಾನಗರ ಪಾಲಿಕೆ ಉಪ-ಆಯುಕ್ತರಾದ ಪ್ರಕಾಶ ರಜಪೂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ,. ರಾಜೇಶೇಖರ ಮಾಲಿ, ಜಿ.ಪಂ.ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ.ಜಾಥವು ಜಗತ್ ಸರ್ಕಲ್‍ನಲ್ಲಿ ಮುಕ್ತಾಗೊಂಡಿತ್ತು.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

2 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago