ಕಲಬುರಗಿ: ವೈಯಕ್ತಿಕ ಲಾಭಕ್ಕಾಗಿ ಬಂಜಾರಾ ಸಮಾಜದ ಹೆಸರು ಬಳಸಿಕೊಂಡು ಶಾಸಕ ಪ್ರೀಯಾಂಕ್ ಖರ್ಗೆ ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಬಿಜೆಪಿ ಮುಖಂಡರಾದ ಅರವಿಂದ ಚವ್ಹಾಣ್ ಹಾಗೂ ಮಣಿಕಂಠ ರಾಠೋಡ ಅವರು ಬಂಜಾರಾ ಸಮಾಜಕ್ಕೆ ನೀಡಿದ ಕೊಡುಗೆ ಏನು ಎಂದು ಕಾಂಗ್ರೆಸ್ ಮುಖಂಡ ಡಾ.ರವಿ ಚವ್ಹಾಣ ಪ್ರಶ್ನಿಸಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ ಅವರು ಬಂಜಾರ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಚಿವರಾಗಿದ್ದಾಗ ನೂರಾರು ಕೋಟಿ ರೂಪಾಯಿ ಬಂಜಾರ ಸಮಾಜದ ಕಲ್ಯಾಣಕ್ಕಾಗಿ ಕೊಡುಗೆ ನೀಡಿದ್ದಾರೆ. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಂಜಾರ ಸಮಾಜವು ಬಿಜೆಪಿ ಮುಖಂಡರು ಹಾಗೂ ಸರ್ಕಾರದ ಬಗ್ಗೆ ಸಿಡಿದೆದ್ದಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಹಾಗೂ ಕೊಡುಗೆಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಕಡೆ ವಾಲುತ್ತಿದೆ. ಕಾಂಗ್ರೆಸ್ ಪಕ್ಷವು ಕೂಡ ಬಂಜಾರ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಬಂಜಾರ ಸಮಾಜದ ಕೆಲ ಪುಡಿ ರಾಜಕೀಯ ಮುಖಂಡರುಗಳು ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ತಿಳಿಸಿದ್ದಾರೆ.
ಮಣಿಕಂಠ ರಾಠೋಡ ಈಗಾಗಲೇ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಅರವಿಂದ್ ಚವ್ಹಾಣ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದಾಗ ಬಹಳಷ್ಟು ಹಗರಣ ಮಾಡಿದ್ದಾರೆ ಎಂದು ರವಿ ಚವ್ಹಾಣ್ ಆರೋಪಿಸಿದ್ದಾರೆ.
ಮಣಿಕಂಠ ರಾಠೋಡ ಮತ್ತು ಅರವಿಂದ ಚವ್ಹಾಣ್ ತಾವೊಬ್ಬ ಬಂಜಾರ ಸಮಾಜದ ಮುಖಂಡರಂತೆ ವರ್ತಿಸುವುತ್ತಿರುವುದು ಖಂಡನೀಯ ವಿಷಯವಾಗಿದೆ. ಚಿತ್ತಾಪುರ ಮಾತ್ರವಲ್ಲದೆ ಇಡೀ ಕರ್ನಾಟಕದಲ್ಲೇ ಪ್ರಿಯಾಂಕ್ ಖರ್ಗೆ ಅವರು ಬಬ್ಬ ಜಾತ್ಯತೀತ ಹಾಗೂ ಅಭಿವೃದ್ಧಿ ಪರ ಚಿಂತನಯುಳ್ಳ ನಾಯಕ ಎಂಬುವುದನ್ನು ಬಂಜಾರ ಸಮಾಜ ಸಂಪೂರ್ಣ ಒಪ್ಪಿಕೊಂಡಿದೆ ಎಂದು ಚವ್ಹಾಣ್ ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…