ಕಲಬುರಗಿ: ಆಳಂದ ತಾಲ್ಲೂಕಿನ ಯಳಸಂಗಿ ಗ್ರಾಮದಲ್ಲಿ ರೈತನೊರ್ವ ಸಾಲಕ್ಕೆ ಹೆದರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಭೀಮರಾವ ಮಲ್ಕಣ್ಣಾ ಯಲ್ದೆ (47) ಮೃತ ದುರ್ದೈವಿ. ಪತ್ನಿ ಸೇರಿದಂತೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳು ಇದ್ದಾಳೆ. ಮೃತ ರೈತನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಾಡಿಯಾಳ 25 ಸಾವಿರ ಮತ್ತು ಮಾದನಹಹಿಪ್ಪರಗಾ ಸಮೃದ್ಧಿ ಬ್ಯಾಂಕಿನಲ್ಲಿ 35 ಸಾವಿರ ಸೇರಿದಂತೆ ಇತರರ ಹತ್ತಿರ ಬೇಸಾಕ್ಕಾಗಿ ಹಾಗೂ ಮಗಳ ಮದುವೆಗಾಗಿ ಒಟ್ಟು 13.5ಲಕ್ಷ್ಯ ಕೈಗಡ ಮತ್ತು ಸಾಲ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಆದರೆ, ಪ್ರಸಕ್ತ ವರ್ಷದಲ್ಲಿ ಮಳೆ ಹೆಚ್ಚಳವಾದರಿಂದ ಇದ್ದ ಬೆಳೆಗಳು ಕೈಕೊಟ್ಟ ಪರಿಣಾಮ ಮಾಡಿದ ಸಾಲ ಹೇಗೆ ಮುಟ್ಟಿಸಬೇಕು ಇಂಬ ಚಿಂತೆ ರೈತನಿಗೆ ಆಗಾಗ ಕಾಡುತ್ತಿತ್ತು ಎನ್ನಲಾಗಿದೆ.
ಬುಧವಾರ ಮದ್ಯಾಹ್ನ 2.30ಕ್ಕೆ ಮನೆಯಲ್ಲಿ ಊಟ ಮುಗಿಸಿಕೊಂಡು ತಮ್ಮ ಹೊಲಕ್ಕೆ ಹೊಲಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದಾನೆ. ಆದರೆ ಹೊಲದಲ್ಲಿರುವ ಬೇವಿನ ಮರಕ್ಕೆ ಸಂಜೆ ನೇಣು ಹಾಕಿಕೊಂಡಿದ್ದಾನೆ. ಇದನ್ನು ಕಂಡ ಅಕ್ಕಪಕ್ಕದ ರೈತರು, ಗ್ರಾಮಸ್ಥರು ಸೇರಿ ಹಗ್ಗ ಬಿಚ್ಚಿ ನೋಡುವಾಗ ಇನ್ನು ಸ್ವಲ್ಪ ಉಸಿರಾಡುತ್ತಿದದ್ದನ್ನು ನೋಡಿ ರೈತನಿಗೆ ರಾತ್ರಿ ನಿಂಬರ್ಗಾ ಸರಕಾರಿ ಆಸ್ಪತ್ರೆಗೆ ಒಯ್ಯುವ ಮಾರ್ಗ ಮಧ್ಯೆದಲ್ಲಿ ಅಸುನಿಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಳು ಹೇಳಿ ಕೊಂಡಿದ್ದಾರೆ. ಪ್ರಕರಣ ನಿಂಬರ್ಗಾ ಠಾಣೆಯಲ್ಲಿ ದಾಖಲಾಗಿದೆ.
ರೈತ ಆತ್ಮಹತ್ಯೆಯ ಸುದ್ದಿ ಅರಿತು ಸ್ಥಳಕ್ಕೆ ಶಾಸಕ ಸುಭಾಷ ಆರ್. ಗುತ್ತೇದಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸರಕಾರಿ ಮಟ್ಟದಲ್ಲಿ ಮೃತನ ಕುಟುಂಬಕ್ಕೆ ಸಿಗುವ ಎಲ್ಲಾ ಪರಿಹಾರವನ್ನು ಪ್ರಮಾಣಿಕವಾಗಿ ದೊರಕಿಸಿಕೊಡುವ ಭರವಸೆ ನೀಡಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…