ಶಹಾಬಾದ: ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಬಿದ್ದು ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದ ರಾಮಘಡ ಆಶ್ರಯ ಕಾಲೋನಿಯ ಸಮೀಪದ ರೇಲ್ವೆ ಹಳಿಯ ಪಕ್ಕದಲ್ಲಿ ಶುಕ್ರವಾರದಂದು ನಡೆದಿದೆ.
ನಗರದ ರಾಮಘಡ ಆಶ್ರಯ ಕಾಲೋನಿಯ ನಿವಾಸಿಗಳಾದ ಮಾಣಿಕಮ್ಮ ಸಾಯಪ್ಪ ದಾಸರ(೨೦) ಮತ್ತು ಕೀರ್ತಿಕಾ ರಾಜೇಶ (೧೨) ಮೃತ ದುರ್ದೈವಿಗಳು.
ಮಾಣಿಕಮ್ಮ ಹಾಗೂ ಕೀರ್ತಿಕಾ ಬಟ್ಟೆ ಒಗೆಯಲು ಸಮೀಪದ ರೇಲ್ವೆ ಹಳಿಯ ಪಕ್ಕದಲ್ಲಿರುವ ಹೊಂಡಕ್ಕೆ ಹೋಗಿದ್ದರು.ಬೆಳಿಗ್ಗೆ ೧೦ ಗಂಟೆಗೆ ಹೋದವರು ೧೨ಗಂಟೆಯಾದರೂ ಬರಲಿಲ್ಲ ಎಂದು ಕೀರ್ತಿಕಾ ಮಾವ ಮಂಜುನಾಥ ಬಟ್ಟೆ ಒಗೆಯುವ ಸ್ಥಳಕ್ಕೆ ಹೋಗಿ ನೋಡಿದಾಗ ಬಟ್ಟೆಗಳು ಮಾತ್ರ ಇದ್ದು, ಇಬ್ಬರು ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಈಜುಗಾರರ ನೆರವಿನಿಂದ ಮೃತ ದೇಹಗಳನ್ನು ತೆಗೆಸಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…