ಮೈ ಮನಸ್ಸು ಮರೆತು ಜಾಧವ ಗೆಲ್ಲಿಸಿ ಪಕ್ಷದ ನಾಯಕರಿಗೆ ಯಡಿಯೂರಪ್ಪ ತಾಕಿತು

0
194

ಕಲಬುರಗಿ: ಇಡೀ ದೇಶದ ಗಮನ ಸೆಳೆದಿರುವ ಕಲಬುರಗಿ ಮತ ಕ್ಷೇತ್ರದಲ್ಲಿ ಬಿಜೆಪಿ ಶತಾಯಗತಾಯ ಗೆಲ್ಲುವ ಉಮೇದಿನಲ್ಲಿದೆ.

ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಎನ್ನುವುದಕ್ಕಿಂತ ಮೋದಿ ವರ್ಸೆಸ್ ಖರ್ಗೆ ಎನ್ನುವಂತಿರುವ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಪಣ ತೊಟ್ಟಂತಿದೆ.

Contact Your\'s Advertisement; 9902492681

ಮಂಡ್ಯ ಕ್ಷೇತ್ರದ ಚುನಾವಣಾ ಪ್ರಚಾರದ ಅಬ್ಬರದಲ್ಲಿ ಕಳೆದು ಹೋಗಿದ್ದ ಕಲಬುರಗಿ ಕ್ಷೇತ್ರದ ಚುನಾವಣೆ ಇದೀಗ ರಂಗೇರತೊಡಗಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಕಲಬುರಗಿ ಮತಕ್ಷೇತ್ರದ ಉಸ್ತುವಾರಿ ವಹಿಸಿರುವ ಎನ್. ರವಿಕುಮಾರ ಇಲ್ಲಿಯೇ ಬೀಡು ಬಿಟ್ಟಿದ್ದಾರೆ.

ಅದರಂತೆ ನಿನ್ನೆ ಕಲಬುರಗಿಗೆ ಆಗಮಿಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ನಿನ್ನೆ ಇಲ್ಲಿಯೇ ಠಿಕಾಣಿ ಹೂಡಿ ಪಕ್ಷದ ಎಲ್ಲ ಪ್ರಮುಖರೊಂದಿಗೆ ಸಭೆ ನಡೆಸಿ ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕು. ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯೋನ್ಮುಖರಾಗಬೇಕು ಎಂದು ತಾಕೀತು ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here