ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದಿಂದ ಪ್ರಬಂಧ ಸ್ಪರ್ಧೆ

0
42

ಶಹಾಬಾದ: ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳ ವತಿಯಿಂದ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ ತಿಳಿಸಿದ್ದಾರೆ.

ಈ ಪ್ರಬಂಧ ಸ್ಪರ್ಧೆ 5ರಿಂದ 10ನೇ ತರಗತಿ ಮಕ್ಕಳಿಗಾಗಿ ಮಾತ್ರ ಆಯೋಜಿಸಲಾಗಿದ್ದು, 5ರಿಂದ 7ನೇ ತರಗತಿ ಮಕ್ಕಳಿಗೆ ಪಂಡಿತ ಜವಾಹರಲಾಲ ನೆಹರು ಹಾಗೂ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾವಿತ್ರಿಬಾಯಿ ಫುಲೆ ವಿಷಯ ನೀಡಲಾಗಿದೆ.ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

Contact Your\'s Advertisement; 9902492681

ಪ್ರಬಂಧ ಸ್ಪರ್ಧೇಯನ್ನು ನವೆಂಬರ್ 26 ರಂದು ಭಂಕೂರು ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿದೆ.ವಿಜೇತರಾದ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ.ಅಲ್ಲದೇ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ತಾಂತ್ರಿಕ ಮುಖ್ಯಸ್ಥೆ ಜ್ಯೋತಿ.ಡಿ.ದಾಮಿನಿ-7019209464 ಇವರನ್ನು ಸಂರ್ಪಿಸಲು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here