ಬಿಸಿ ಬಿಸಿ ಸುದ್ದಿ

ಶಿಕ್ಷಕರ ವೇತನಾನುದಾನಕ್ಕಾಗಿ ಬೆಂಗಳೂರಿಗೆ ಪಾದಯಾತ್ರೆ

ಸುರಪುರ: ರಾಜ್ಯದಲ್ಲಿನ ಅನುದಾನ ರಹಿತ ಶಾಲಾ ಕಾಲೇಜು ಶಿಕ್ಷಕರ ವೇತನಾನುದಾನಕ್ಕಾಗಿ,ಅತಿಥಿ,ದೈಹಿಕ ಶಿಕ್ಷಕರ ಖಾಯಂ ಸೇವಾ ಭದ್ರತೆಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಮತ್ತು ಶಾಲಾ-ಕಾಲೇಜು ಶಿಕ್ಷಕರ ಸಂಘದ ಮುಖಂಡರಾದ ಕಿರಣಕುಮಾರ ಗುರುವ,ಪ್ರವೀಣಕುಮಾರ ಹಾಗೂ ಶಾಂತಿಕುಮಾರ ತಿಳಿಸಿದ್ದಾರೆ.

ವಿನೂತನ ಹೋರಾಟ ರೂಪಿಸಿ,ಡಿಪ್ಲೋಮಾ,ಇಂಜಿನಿಯರಿಂಗ್ ಮತ್ತು ಐಟಿಐ ನೌಕರರ ಸಿಬ್ಬಂದಿಗಳ ವೇತನಾನುಧಾನಕ್ಕಾಗಿ ಮತ್ತು ವಿವಿಧ ಶೈಕ್ಷಣಿಕ ಬೇಡಿಕೆಗಳಿಗಾಗಿ ಅವರು ಬೀದರ ದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದು, ರವಿವಾರ ಸುರಪುರ ನಗರಕ್ಕೆ ಆಗಮಿಸಿದ್ದರಿಂದ ಮೂರು ಜನ ಪಾದಯಾತ್ರಾರ್ಥಿಗಳಿಗೆ ನಗರದ ಡಾ:ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ರೂಪ್ಸ್ ಸಂಘದ ಅನೇಕ ಮುಖಂಡರು ಸನ್ಮಾನಿಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಮ್ಯಾನೇಜಮೆಂಟ್ ಸಂಘದ ಅಧ್ಯಕ್ಷ ಲಂಕೆಪ್ಪ ಕವಲಿ,ಅಪ್ಪಣ್ಣ ಕುಲಕರ್ಣಿ,ಸೋಮಶೇಖರ ಶಾಬಾದಿ,ಶಿವರಾಜ ನಾಯಕ,ಬಲಭೀಮ ನಾಯಕ ದೇವಾಪುರ,ಮಲ್ಲಿಕಾರ್ಜುನ ಕುಲಕರ್ಣಿ,ಕಲ್ಯಾಣಿಕುಮಾರ ಜಾಧವ್ ಸೇರಿದಂತೆ ಅನೇಕ ಭಾಗವಹಿಸಿದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

1 hour ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago