ಕನ್ನಡ ಕಟ್ಟುವುದಕ್ಕಾಗಿ ಭಾಲ್ಕಿ ಮಠದ ಕೊಡುಗೆ ಅಪಾರ

ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಭೇಟಿ ನೀಡಿ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರ ಆಶೀರ್ವಾದ ಪಡೆದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸ.ಚಿ.ರಮೇಶ ಅವರು ಭಾಲ್ಕಿ ಮಠದ ಕನ್ನಡ ಕೊಡುಗೆ ಕುರಿತು ಅಭಿಮಾನದ ಮಾತುಗಳನ್ನು ಆಡಿದರು. ನಿಜಾಮನ ಆಡಳಿತದಲ್ಲಿ ಹೊರಗೆ ಉರ್ದು ಬೋರ್ಡ ಹಾಕಿ ಒಳಗೆ ಕನ್ನಡ ಕಲಿಸಿದ ಕೀರ್ತಿ ಭಾಲ್ಕಿ ಮಠದ ಪೂಜ್ಯ ಶ್ರೀ ಡಾ.ಚನ್ನಬಸ ಪಟ್ಟದ್ದೇವರಿಗೆ ಸಲ್ಲುತ್ತದೆ. ಅದಕ್ಕಾಗಿಯೇ ಈ ನಾಡಿನ ಖ್ಯಾತ ಸಂಶೋಧಕರಾದ ಡಾ.ಎಂ.ಎಂ.ಕಲಬುರಗಿ ಅವರು ಹಿರಿಯ ಪೂಜ್ಯರಿಗೆ ಯುಗಪುರುಷ ಎಂದು ಕರೆದಿರುವುದು ನಿಜಕ್ಕೂ ಅರ್ಥಪೂರ್ಣ. ಶ್ರೀಮಠ ಧಾರ್ಮಿಕ ಸಂಸ್ಕಾರಗಳಿಗೆ ಸೀಮಿತವಾಗಿರದೇ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಅಭಿನಂದನೀಯವಾಗಿದೆ. ಬಸವಾದಿ ಶರಣರ ತತ್ವಗಳು ನೆರೆಯ ರಾಜ್ಯಗಳಲ್ಲಿ ಪಸರಿಸುವ ದಿಶೆಯಲ್ಲಿ ಇಂದಿನ ಪೂಜ್ಯರಾದ ಡಾ.ಬಸವಲಿಂಗ ಪಟ್ಟದ್ದೇವರು ಮರಾಠಿ, ತೆಲಗು, ಹಿಂದಿ ಮುಂತಾದ ಭಾಷೆಗಳಲ್ಲಿ ಅನುವಾದ ಮಾಡಿ ಪುಸ್ತಕ ಪ್ರಕಟಿಸಿರುತ್ತಿರುವುದು ಒಂದು ಐತಿಹಾಸಿಕ ಕಾರ್ಯವಾಗಿದೆ. ಪೂಜ್ಯರ ಎಲ್ಲ ಕಾರ್ಯಕ್ಕೆ ಕ್ರಿಯಾಶಕ್ತಿಯಾಗಿ ದುಡಿಯುತ್ತಿರುವ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ನಮ್ಮೆಲ್ಲರಿಗೆ ಮಾದರಿಯಾಗಿದ್ದಾರೆ ಎಂದು ನುಡಿದರು.

ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಸಾನಿಧ್ಯವಹಿಸಿ, ಹಂಪಿಯ ಕನ್ನಡ ವಿಶ್ವವಿದ್ಯಾಲದ ಕುಲಪತಿಗಳಾಗಿ ಕನ್ನಡದ ಮಠಕ್ಕೆ ಭೇಟಿ ನೀಡಿರುವುದು ನಮಗೆ ಅತ್ಯಂತ ಸಂತೋಷವನ್ನುಂಟು ಆಗಿದೆ. ಕೋವಿಡದ ಸಂದರ್ಭದಲ್ಲಿ ಪ್ರೊ.ಸ.ಚಿ.ರಮೇಶ ಅವರು ಮಾಡಿರುವ ಕಾರ್ಯ ಅಭಿನಂದನೀಯವಾಗಿದೆ ಎಂದು ಆಶೀರ್ವಚನ ನೀಡಿದರು. ಪೂಜ್ಯರು ಪ್ರೊ.ಸ.ಚಿ.ರಮೇಶ ಮತ್ತು ಧರ್ಮಪತ್ನಿಯಾದ ಚೈತ್ರಾ ಮತ್ತು ಮಗನಾದ ಅಭಿರಾಮ ಅವರಿಗೆ ಸತ್ಕರಿಸಿ ಆಶೀರ್ವದಿಸಿರು.

ಜಾನಪದ ಸಾಹಿತ್ಯ ಪರಿಷತ್ತಿನ ಔರಾದ ತಾಲೂಕು ಘಟಕದ ಅಧ್ಯಕ್ಷರಾದ ಡಾ.ಸಂಜುಕುಮಾರ ಜುಮ್ಮಾ, ಹಿರೇಮಠ ಸಂಸ್ಥಾನ ವಿದ್ಯಾಪೀಠದ ಆಡಳಿತಾಧಿಕಾರಿಯಾದ ಮೋಹನರೆಡ್ಡಿ, ಶಾಂತಯ್ಯ ಸ್ವಾಮಿ, ರಾಜು ಜುಬರೆ, ದೀಪಕ ಥಮಕೆ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

1 hour ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

15 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420