ಆನೇಕಲ್: ಶಾಲಾ ವಿದ್ಯಾರ್ಥಿಗಳು ಮೊಬೈಲ್ ಗಳನ್ನು ದೂರವಿಟ್ಟು, ಆಟ-ಪಾಠಗಳತ್ತ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಸರಕಾರಿ ಅಭಿಯೋಜಕರಾದ ಚಂದ್ರಶೇಖರ್ ಆರ್ ಸಲಹೆ ನೀಡಿದ್ದಾರೆ.
ತಾಲ್ಲೂಕಿನ ದೇವಾಂಗಪೇಟೆ ಸರಕಾರಿ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ದೇವಾಂಗಪೇಟೆ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ ಗಳಿಗೆ ಅಂಟಿಕೊಳ್ಳದಂತೆ ಜಾಗ್ರತೆ ವಹಿಸುವುದು ಪೋಷಕರು, ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿ ವಿದ್ಯಾರ್ಥಿಯು ಭವಿಷ್ಯದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಕಲಿಯುವ ಮೂಲಕ ಕುಟುಂಬಕ್ಕೆ, ದೇಶಕ್ಕೆ ಆಸರೆ ಆಗಬೇಕು. ಆ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದ್ದಾರೆ.
ವಕೀಲ ಪುರುಷೋತ್ತಮ್ ಮಾತನಾಡಿ, ಮಕ್ಕಳು ದುಡಿಯ ಬಾರದು ಶಾಲೆಗೆ ಬಂದು ಅಕ್ಷರ ಕಲಿಯಬೇಕು, ಕೆಲಸ ಮಾಡಿಸಿಕೊಳೋದು ಅಪರಾಧ 25 ಸಾವಿರದ ವರೆಗೂ ದಂಡ ಹಾಕುತ್ತಾರೆ ಹಾಗೆಯೇ ಕೆಲಸ ಮಾಡೋದು ಕೂಡ ಅಪರಾಧ ಎಂದು ಹೇಳಿದರು, ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು , ಹಾಡು ನಾಟಕ ನೃತ್ಯ ಮಾಡಿದರು.
ಶಾಲೆಯ ಶಿಕ್ಷಕರು ನೃತ್ಯ ಮಾಡಿ ಮಕ್ಕಳನ್ನು ರಂಹಜಿಸಿದರು,
ಕಾರ್ಯಕ್ರಮದಲ್ಲಿ, ಶಾಲೆಯ ಶಿಕ್ಷಕರಾದ ಮಂಜುಳಾ, ಸರೋಜಾ, ಮಂಜುನಾಥ, ಪರ್ವೀನ್ ಫಾತಿಮಾ ಆರೋಗ್ಯ ಮೇರಿ, ಅತಿಥಿ ಶಿಕ್ಷಕರು, ವಕೀಲರಾದ ಎಂ. ಎ ಶಿವರಾಜು, ಚಂದ್ರಶೇಖರ್, ಅನುರಾಧಾ ಆರ್ ಮತ್ತು ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು,
ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…