ಕಲಬುರಗಿ: ನೆಹರೂ ಯುವ ಕೇಂದ್ರ ಕಲಬುರಗಿ ಮತ್ತು ಕಿರಾಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಘ (ರಿ) ಕಲಬುರಗಿ ವತಿಯಿಂದ ಸೋಮವಾರ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ ನೆಹರೂ ಅವರ 133ನೇ ಜನ್ಮದಿನ ಪ್ರಯುಕ್ತ ಮಕ್ಕಳ ಹಬ್ಬದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿ ಪಾಲಿಕೆ ಇಂದಿರಾ ಸ್ಮಾರಕ ಭವನದ ಆವರಣದಲ್ಲಿ ನಿರ್ಮಾಣಗೋಂಡ ನೆಹರು ಪ್ರತಿಮೆಗೆ ಗೌರವ ನೀಡದೆ ಅವಮಾನ ಮಾಡಿರುವುದನ್ನು ಖಂಡಿಸಿದರು. ನೆಹರು ಜನ್ಮದಿನ ಪ್ರಯುಕ್ತ ಮಕ್ಕಳ ಹಬ್ಬದ ಕಾರ್ಯಕ್ರಮವನ್ನು ಆಯೋಜಿಸಿದ ನಾಲವಾರಕರ್ ರವರಿಗೆ ಅಭಿನಂದನೆಗಳು ಸಲ್ಲಿಸಿದರು.
ಈ ವೇಳೆಯಲ್ಲಿ ಮಕ್ಕಳಿಗೆ ಗೌರವ ಸತ್ಕಾರ ಮಾಡಲಾಯಿತು, ನಂತರ ಕಿರಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಘದ ವತಿಯಿಂದ ಸುರೇಶ ಬಡಿಗೇರ, ಡಾ. ಶಿವಶರಣ ಕೋಡ್ಲಿ, ಅವರ ಪತ್ನಿ ಹಾಗೂ ಡಾ. ಶರಣಪ್ಪ ಮಾಳಗೆ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಯಿತು.
ಮಾಜಿ ಕಾಡಾ ಅಧ್ಯಕ್ಷರಾದ ಮಾಹಾಂತಪ್ಪ ಸಂಗಾವಿ,ಸಚೀನ ಫರಹತಾಬಾದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ರವಿಚಂದ್ರ ಗುತ್ತೇದಾರ,ರವಿ ದೇಗಾಂವ,ಧೂಳಪ್ಪ ದ್ಯಾಮನಕರ್,ಮಂಜುನಾಥ ನಾಲವಾರಕರ್, ಪ್ರಲ್ಹಾದ ಹಡಗಿಲಕರ್,ಚರಣರಾಜ ರಾಠೋಡ, ಅರವಿಂದ ನಾಟೀಕಾರ, ನಾಗನಾಥ ನಾಲವಾರಕರ್,ಗಣೇಶ ಕೋಡಕಲ್,ಇನ್ನಿತರು ಭಾಗವಹಿಸಿದ
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…