ಸುರಪುರ: ತಾಲೂಕಿನ ಲಕ್ಷ್ಮೀಪುರ ಬಳಿಯಲ್ಲಿನ ಬೀದರ-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಬೈಕ್ ಮದ್ಯೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ವೀಫ್ಟ್ ಕಾರು ಸುರಪುರ ನಗರದಿಂದ ದೇವದುರ್ಗ ಕಡೆಗೆಂದು ಹೋಗುತ್ತಿತ್ತು ,ಅತ್ತ ಕೃಷ್ಣಾಪುರ ಕಡೆಯಿಂದ ಅದೇ ಗ್ರಾಮದ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಹೋಗುತ್ತಿರುವಾಗ ಮುಂದೆ ಹೋಗುತ್ತಿದ್ದ ವಾಹನಕ್ಕೆ ಓವರ್ಟೇಕ್ ಮಾಡಲು ಹೋಗಿ ಎದುರಿಂದ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಬೈಕ್ನಲ್ಲಿದ್ದ ಹಿಂಬದಿಯ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದು ಮುಂದೆ ಬೈಕ್ ಓಡಿಸುತ್ತಿರುವ ವ್ಯಕ್ತಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ,ಸಾವನ್ನಪ್ಪಿರುವ ವ್ಯಕ್ತಿ ಯಾರು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಲಿದ್ದು ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ.