ಡಾ. ಸುರೇಶ ಆರ್ ಸಜ್ಜನ್‍ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

0
38

ಸುರಪುರ: ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಡಾ:ಸುರೇಶ್ ಆರ್ ಸಜ್ಜನ್ ಅವರಿಗೆ ಕರ್ನಾಟಕ ಸರಕಾರ ದಿಂದ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸೇಡಂ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ ನಿರಾಣಿ,ಜಿ.ಟಿ ದೇವೆಗೌಡ,ಸಂಸದ ಭಗವಂತ ಖೂಬಾ,ಉಮೇಶ ಜಾಧವ್, ಶಾಸಕರಾದ ನರಸಿಂಹ ನಾಯಕ ರಾಜುಗೌಡ,ರಾಜಕುಮಾರ ಪಾಟೀಲ್ ತೇಲ್ಕೂರ್,ಬಸವರಾಜ ಮತ್ತಿಮೂಡ ಹಾಗೂ ಡಿಸಿಸಿ ಬ್ಯಾಂಕ್ ಯಾದಗಿರಿ ನಿರ್ದೇಶಕ ಬಾಪುಗೌಡ ಪಾಟೀಲ್ ಸೇರಿದಂತೆ ಅನೇಕ ಜನ ಸಹಕಾರಿ ಧುರಿಣರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here