ಎಸ್‍ಸಿ, ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಇದೇ ವಿಷಯವನ್ನಿಟ್ಟುಕೊಂಡು ವಾಲ್ಮೀಕಿ ಸಮುದಾಯದವರು ಮಂಗಳವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಬಳಿ ತೆರಳಿ ನಕಲಿ ಪ್ರಮಾಣಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಮನವಿ ಸಲ್ಲಿಸಿದರು.

ಕಲಬುರಗಿ: ನಾಯಕ ಸಮುದಾಯಕ್ಕೆ ಸೇರಿದ ತಳವಾರ ಹಾಗೂ ಪರಿವಾರ ಸಮುದಾಯದ ಹೊರತುಪಡಿಸಿ ಇತರೆ ಸಮುದಾಯಗಳು ತಳವಾರ ಸಮುದಾಯಕ್ಕೆ ಕಾನೂನು ಬಾಹಿರವಾಗಿ ಎಸ್.ಟಿ. ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಮಹರ್ಷಿ ವಾಲ್ಮೀಕಿ ನಾಯಕರ ಸಂಘ, ರಾಜ್ಯ ಎಸ್‍ಸಿ, ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ಆರೋಪಿಸಿತು.

ಸಮಿತಿ ಮುಖಂಡ ನಿವೃತ್ತ ಜಿಲ್ಲಾಧಿಕಾರಿ ಶಿವಪ್ಪ ಮಾತನಾಡಿ, ಮುಖ್ಯಮಂತ್ರಿಗಳು ಸಮಾವೇಶದಲ್ಲಿ ತಳವಾರರಿಗೆ ಎಸ್.ಟಿ. ಪ್ರಮಾಣ ಪತ್ರ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆದೇಶದಲ್ಲಿ ನಾಯಕ ಹಾಗೂ ವಾಲ್ಮೀಕಿ ಸಮುದಾಯಗಳಿಗೆ ಸೇರಿದ ಪರಿಶಿಷ್ಟ ಪಂಗಡದ ಕ್ರಂಘಿ.ಸಂ 38ರಲ್ಲಿ ಬರುವ ನಾಯ್ಕಡ, ನಾಯಕ, ಚೋಳ ನಾಯಕ, ಕಪಾಡಿಯಾ ನಾಯಕ, ಮೋಟಾ ನಾಯಕ ಜಾತಿಗಳ ಜತೆ ಅದೇ ಜಾತಿಯ ಪರಿವಾರ-ತಳವಾರ ಜಾತಿಗಳಿಗೆ ಪರಿಶಿಷ್ಟ ಪಂಗಡದ ಸೌಲಭ್ಯಗಳನ್ನು ವಿಸ್ತರಿಸಿ ಕೇಂದ್ರ ಸರಕಾರ ಆದೇಶದ ಗೆಜೆಟ್ ಹೊರಡಿಸಿದೆ. ಇದರಂತೆ ಸಮಾಜ ಕಲ್ಯಾಣ ಇಲಾಖೆಯ ಆಧೀನ ಕಾರ್ಯದರ್ಶಿಗಳು ಆದೇಶ  ನೀಡಿದ್ದಾರೆ.

ಆದರೆ ಹಿಂದುಳಿದ ವರ್ಗದವರ ಪಟ್ಟಿಯ 88ಎಚ್ ನಲ್ಲಿ ಅಂಬಿಗ, ಗಂಗಾಮತಸ್ಥಘಿ, ಕಬ್ಬಲಿಗ ಜಾತಿ ಸೂಚಕ ಪದಗಳ ತಳವಾರರಿಗೆ ಜಾತಿ ಪ್ರಮಾನ ನೀಡಲು ಬರುವುದಿಲ್ಲ. ರಾಜ್ಯದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ನಾಯಕ ಜನಾಂಗದವರು ತಳವಾರ ಎಂದು ಜಾತಿ ಕಲಂನಲ್ಲಿ ನೋಂದಣಿ ಮಾಡಿಲ್ಲ. ಆದರೆ ಬೇರೆ ಜಾತಿಯವರು ಜಾತಿ ಕಲಂನಲ್ಲಿ ತಳವಾರ ಎಂದು ನಮೂದಿಸಿದ್ದಾರೆ. ಇಂತವರಿಗೆ ಯಾವುದೇ ಕಾರಣಕ್ಕೂ ಎಸ್‍ಟಿ ಪ್ರಮಾನ ಪತ್ರ ನೀಡಬಾರದು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಕೆಲವರು ವಾಲ್ಮೀಕಿ ಸಮುದಾಯದ ತಳವಾರರಿಗೆ ಎಸ್‍ಟಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹೊರಡಿಸುತ್ತಿದ್ದಾರೆ. ಇದರಿಂದ ಅಣ್ಣ ತಮ್ಮಂದಿರಂತೆ ಇರುವ ಜಾರಿಗಳ ನಡುವೆ ಕಲಹ ಉಂಟು ಮಾಡುತ್ತಿದ್ದಾರೆ ಎಂದು ಹೇಳಿದರು.
ಮುಖಂಡ ಮಾರೆಪ್ಪ ನಾಯಕ ಮಗ್ದಂಪೂರ ಮಾತನಾಡಿ, ಸಮುದಾಯ ಮುಖಂಡ, ಹೋರಾಟಗಾರ ಶ್ರವಣಕುಮಾರ ನಾಯಕ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇಲ್ಲಿವರೆಗೆ ನಮ್ಮ ಸುಮಾಯದ ಹೋರಾಟಗಾರರು ಯಾವುದೇ ಪ್ರಕರಣ ಹಿಂಪಡೆದಿಲ್ಲ. ಅವರು ಹೇಳಿದನ್ನು ಸಾಬೀತು ಮಾಡಬೇಕು ಇಲ್ಲದಿದ್ದರೆ ಮಾನ ನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿದರು. ವಿಭಾಗೀಯ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ್, ಸಿರಿಗೇರಿ ತಿಪ್ಪೇಶಿ ಕೆ.ಎಸ್.ಮೃತ್ಯುಂಜಯ ಮತ್ತಿತರರು ಇದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

5 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420