ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ಜತೆ ಮೈತ್ರಿ ಇಲ್ಲ | ಶಾಲೆಗಳಿಗೆ ಕೇಸರಿ ಬಣ್ಣ; ಮಾಜಿ CM ಕಿಡಿ

ಬೆಂಗಳೂರು: ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ ಎಂದರು.

ಸಿದ್ದರಾಮಯ್ಯ ಅವರು ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ. ನಾವೇನು ಬಿಜೆಪಿ ಜತೆ ಸೇರಿ ಅವರ ವಿರುದ್ಧ ಕುತಂತ್ರ ಮಾಡಬೇಕಿಲ್ಲ. ಬಿಜೆಪಿಯವರಂತೆ ಸಣ್ಣ ಮಟ್ಟದದಲ್ಲಿ ನಾನು ಮಾತನಾಡುವುದಿಲ್ಲ. ನಾವು ಏನೇ ಮಾಡಿದರೂ ಸೋಲಿಸುವುದು, ಗೆಲ್ಲಿಸುವುದು ನಮ್ಮ ಕೈಯಲ್ಲಿ ಇರುವುದಿಲ್ಲ. ನಮಗೆ ಕೋಲಾರದಲ್ಲಿ ಸಮಸ್ಯೆಯೇ ಇಲ್ಲ.‌ ಪಕ್ಷದ ಅಭ್ಯರ್ಥಿ ಯಾರು ಅನ್ನುವ ನಿರ್ಣಯ ಆಗಿದೆ. ಬೇರೆ ಪಕ್ಷದ ಜತೆ ಸೇರಿ ತಂತ್ರಗಾರಿಕೆ ಮಾಡುವಂತದ್ದೇನೂ ಇಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರೇ ಆಗಲಿ, ಇನ್ನೊಬ್ಬರೇ ಬರಲಿ, ನಮಗೆ ಹೆದರಿಕೆ ಇಲ್ಲ. ಕೋಲಾರದಲ್ಲಿ ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾರೆ‌. ಹೀಗೆ ಹೇಳಿದ ಕೂಡಲೇ ಸಿದ್ದರಾಮಯ್ಯ ಬಗ್ಗೆ ನಾವು ಸಾಫ್ಟ್ ಅಂತ ಅಲ್ಲ. ಎಲ್ಲರ ರೀತಿ ನಾವು ವೀರಾವೇಶದಿಂದ ಮಾತನಾಡುವುದು ಪ್ರಯೋಜನ ಇಲ್ಲ. ಎಲ್ಲಿ ಎನು ಕೆಲಸ ಮಾಡಬೇಕೊ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ನಾವು ಸೋಲಿಸಬೇಕಿಲ್ಲ, ಅವರ ಪಕ್ಷದವರೇ ಸೋಲಿಸುತ್ತಾರೆ ಎಂದು ಬಗ್ಗೆ ಹೆಚ್ ಡಿಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪಕ್ಷದ ಅಧ್ಯಕ್ಷರು ಹಾಗಾಗಿ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿ ನೀಡಿದೆ. ಹಲವಾರು ವಿಚಾರಗಳ ಚರ್ಚೆ ಮಾಡಿದ್ದೇನೆ.
ಪಕ್ಷದ ಸಂಘಟನೆ, ನವೆಂಬರ್ 18ರಿಂದ ಪಂಚರತ್ನ ರಥಯಾತ್ರೆ ಪ್ರಾರಂಭ ಮಾಡಬೇಕು ಅಂತ ಇದ್ದೇವೆ. ಯಾವ ರೀತಿ ಮಾಡಬೇಕು ಅಂತ ಚರ್ಚೆ ಮಾಡಲು ಬಂದಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ವಿಚಾರವಾಗಿಯೂ ಮಾತನಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ನಾವು ಸಹ ಪ್ರತಿ ಅಭ್ಯರ್ಥಿ ಗಳಿಗೆ ಮುಂದಿನ ಆರು ತಿಂಗಳಿಗೆ ಯಾವ ರೀತಿ ಚುನಾವಣಾ ತಂತ್ರ ಅಳವಡಿಸಬೇಕು.‌ ಪ್ರತಿ ಬೂತ್ ಮಟ್ಟದಲ್ಲಿ ಯಾವ ರೀತಿ ಜವಾಬ್ದಾರಿ ನಿರ್ವಹಣೆ, ಪ್ರತಿ ಮನೆ ಮನೆಗೆ ಪಂಚರತ್ನ‌ ಯೋಜನೆ ಮುಟ್ಟಿಸುವ ವಿಚಾರ. ಪ್ರತಿ ಅಭ್ಯರ್ಥಿ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು. ನಿತ್ಯದ ಅವರ ಚಟುವಟಿಕೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಯಾವ ರೀತಿ ಮಾಡಬೇಕು.

ನಮ್ಮ ಪಕ್ಷ ಸೈಲೆಂಟ್ ಆಗಿ ಕೆಲಸ ಮಾಡ್ತಾ ಇದ್ದೇವೆ. ಅಧ್ಯಕ್ಷರು ನಿಲ್ಲಿಸಬೇಕು ಅಂತ ಎಂಟತ್ತು ಕ್ಷೇತ್ರದಲ್ಲಿ ಒತ್ತಡ ಇದೆ. ನಾನು ಅವರು ಇಬ್ಬರೇ ಓಡಾಡಬೇಕಾಗಿದೆ. ಇಬ್ರಾಹಿಂ ಹಾಗೂ ನಾನು ರಾಜ್ಯ ಸುತ್ತಬೇಕು. ಪಕ್ಷ ಸಂಪೂರ್ಣ ಬಹುಮತ ತರಲು ಮಾಡಲಾಗುತ್ತದೆ ಎಂದು ಹೇಳಿದರು.

ಇವರು ಕೇಸರಿ ಬಣ್ಣ ಬಳಿಯುತ್ತಾರೆ, ಇನ್ನೊಬ್ಬರು ಬಂದು ಇನ್ನೊಂದು ಬಣ್ಣ ಬಳಿಯುತ್ತಾರೆ.ಶಾಲೆಗಳಿಗೆ ಕೇಸರಿ ಬಣ್ಣ ಹಚ್ಚುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಇವರು ( ಬಿಜೆಪಿ) ಬಂದಿದ್ದಾರೆ ಕೇಸರಿ ಬಣ್ಣ ಹಚ್ಚುತ್ತಿದ್ದಾರೆ. ಮುಂದೆ ಬರುವವರು ಇನ್ನೊಂದು ಬಣ್ಣ ಹಚ್ಚುತ್ತಾರೆ. ಒಬ್ಬಬ್ಬೊರು ಒಂದೊಂದು ಬಣ್ಣ ಹಚ್ತಾರೆ.ಕಲಿಕೆಗೆ ಪ್ರಾಮುಖ್ಯತೆ ಕೊಡಬೇಕಿದೆ ಎಂದರು.

ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಕುಮಾರಸ್ವಾಮಿ ಅವರು, ಅವರಿಗೆ ಒಡೆಯೋದೇ ಕೆಲಸ.‌ ಬಿಜೆಪಿಯವರಿಗೆ ಕಟ್ಟಿ ಅಭ್ಯಾಸ ಇಲ್ಲ.‌
ಜನ ಇವರ ಹೇಳಿಕೆಗಳನ್ನು ಗಮನಿಸಬೇಕು. ಜನಕ್ಕೆ ನೆರಳು ಕೊಡೋದು ಮುಖ್ಯ. ನೆರಳು ಕೊಡೋದು ಯಾವುದಾದ್ರೇನು? ಎಂದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420